
ಮಂಡ್ಯ, (ಜ.30): ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಕಾರ್ಯಕರ್ತ ಸಿ.ಟಿ. ಮಂಜುನಾಥ್ ಮಾಡಿದ್ದ ಮನವಿಗೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ.
ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಂಬಂಧಿಸಿದ ಕೇಂದ್ರ ಜಲ ಆಯೋಗ ಹಾಗೂ ಕೇಂದ್ರ ಅಣೆಕಟ್ಟು ಸುರಕ್ಷತಾ ಸಮಿತಿ, ಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಇಲಾಖೆ ಅಧೀನ ಕಾರ್ಯದರ್ಶಿಗೆ ಇ-ಮೇಲ್ ರವಾನಿಸಿ ಸೂಚಿಸಿದೆ.
ಗಣಿಗಾರಿಕೆಯಿಂದ KRSಗೂ ಕಾದಿದೆ ಮಹಾ ಆಪತ್ತು : ಸಿಎಂ ಖಡಕ್ ಸೂಚನೆ
ಜ.24ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿ.ಟಿ. ಮಂಜುನಾಥ್ ಪತ್ರ ಬರೆದು ಶಿವಮೊಗ್ಗದಲ್ಲಿ ಸ್ಫೋಟಕಗಳನ್ನು ತುಂಬಿದ್ದ ಲಾರಿ ಸ್ಫೋಟಗೊಂಡ ವಿಷಯವನ್ನು ಪ್ರಸ್ತಾಪಿಸಿ ಜೊತೆಗೆ ಕೃಷ್ಣರಾಜಸಾಗರ ಸಮೀಪದ ಬೇಬಿ ಬೆಟ್ಟದಲ್ಲಿ 2018ರ ಸೆ.25ರಂದು ಗಣಿ ಸ್ಫೋಟ ಸಂಭವಿಸಿದ್ದನ್ನು ಉಲ್ಲೇಖಿಸಿದ್ದರು.
ಈ ಸ್ಫೋಟ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ್ದ ವೈಜ್ಞಾನಿಕ ವರದಿ, ಅಣೆಕಟ್ಟೆ ಸುರಕ್ಷತೆಗೆ ನೀಡಿದ್ದ ಸಲಹೆ ಹಾಗೂ 20 ಕಿ.ಮೀ. ವ್ಯಾಪ್ತಿಯಲ್ಲಿ ಕಲ್ಲು ಗಣಿ ಚಟುವಟಿಕೆ ನಿಷೇಧಿಸುವಂತೆ ಸಲಹೆ ನೀಡಿದ್ದನ್ನು ಮನವಿ ಪತ್ರದಲ್ಲಿ ಪ್ರಸ್ತಾಪಿಸಿ ಅಂಚೆ ಹಾಗೂ ಇ-ಮೇಲ್ ಮೂಲಕ ಕಳುಹಿಸಿದ್ದರು.
ಪಕ್ಷದ ಕಾರ್ಯಕರ್ತ ರವಾನಿಸಸಿದ ಮನವಿಯನ್ನು ಪರಿಶೀಲನೆ ನಡೆಸಿದ ಪ್ರಧಾನಿ ಕಾರ್ಯಾಲಯ, ತಕ್ಷಣ ಈ ಬಗ್ಗೆ ಕ್ರಮ ವಹಿಸಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದೆ.
ಜಲಸಂಪನ್ಮೂಲ ಇಲಾಖೆಯ ಅಧೀನ ಕಾರ್ಯದರ್ಶಿ ಕೆ. ಸುಶೀಲ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ