ಮೇಕೆದಾಟು ವಿವಾದ ಮಧ್ಯಸ್ಥಿಕೆ ವಹಿಸಲು ಪ್ರಧಾನಿ ಮೋದಿ ನಕಾರ: ಡಿಕೆಶಿ

Published : Aug 01, 2024, 04:28 AM ISTUpdated : Aug 01, 2024, 01:01 PM IST
ಮೇಕೆದಾಟು ವಿವಾದ ಮಧ್ಯಸ್ಥಿಕೆ ವಹಿಸಲು ಪ್ರಧಾನಿ ಮೋದಿ ನಕಾರ: ಡಿಕೆಶಿ

ಸಾರಾಂಶ

ಮಹದಾಯಿ ಸಮಸ್ಯೆ ಬಗೆಹರಿಸಲು ಸಭೆ ನಡೆಸುವಂತೆ ಕೇಳಿಕೊಂಡಿದ್ದೇವೆ. ಇದೇ ವೇಳೆ ಮೇಕೆದಾಟು ಸಮಸ್ಯೆ ವಿಚಾರ ಪ್ರಸ್ತಾಪಿದಾಗ ನೀವೇ ಮಾತುಕತೆ ಮೂಲಕ ಬಗೆಹರಿಸಿಕೊಂಡರೆ ಉತ್ತಮ ಎಂದು ಮೋದಿ ಸಲಹೆ ನೀಡಿದ್ದಾರೆ ಎಂದ ಡಿ.ಕೆ.ಶಿವಕುಮಾರ್‌ 

ನವದೆಹಲಿ(ಆ.01): ತಮಿಳುನಾಡು ಮತ್ತು ಕರ್ನಾಟಕದ ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆ ವಿಚಾರದಲ್ಲಿ ಸದ್ಯಕ್ಕೆ ಮಧ್ಯಪ್ರವೇಶಿಸದಿರಲು ಕೇಂದ್ರ ನಿರ್ಧರಿಸಿದೆ. ಮೇಕೆದಾಟು ವಿವಾದವನ್ನು ತಮಿಳುನಾಡು ಮತ್ತು ಕರ್ನಾಟಕ ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಂಡರೆ ಉತ್ತಮ ಎಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸಲಹೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಬುಧವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಅವರು ಈ ಸಲಹೆ ನೀಡಿದ್ದಾರೆ.

ಮೋದಿ ಭೇಟಿ ಬಳಿ ಬಳಿಕ ಸುದ್ದಿಗಾರರ ಜತೆಗೆ ಈ ವಿಚಾರ ಹಂಚಿಕೊಂಡ ಡಿ.ಕೆ.ಶಿವಕುಮಾರ್‌, ಮಹದಾಯಿ ಸಮಸ್ಯೆ ಬಗೆಹರಿಸಲು ಸಭೆ ನಡೆಸುವಂತೆ ಕೇಳಿಕೊಂಡಿದ್ದೇವೆ. ಇದೇ ವೇಳೆ ಮೇಕೆದಾಟು ಸಮಸ್ಯೆ ವಿಚಾರ ಪ್ರಸ್ತಾಪಿದಾಗ ನೀವೇ ಮಾತುಕತೆ ಮೂಲಕ ಬಗೆಹರಿಸಿಕೊಂಡರೆ ಉತ್ತಮ ಎಂದು ಮೋದಿ ಸಲಹೆ ನೀಡಿದ್ದಾರೆ ಎಂದರು.

ಮೇಕೆದಾಟು ಯೋಜನೆಗೆ ತಮಿಳರ ಅಡ್ಡಿ ಬೇಡ: ಮೋದಿಗೆ ದೇವೇಗೌಡ ಮನವಿ

ಇತಿಹಾಸದಲ್ಲೇ ಹೆಚ್ಚಿನ ನೀರು: ಈ ಬಾರಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು. ಆದರೆ, 84 ಟಿಎಂಸಿಗಿಂತ ಹೆಚ್ಚು ನೀರು ಬಿಟ್ಟಿದ್ದೇವೆಂದು ಪ್ರಧಾನಿ ಗಮನಕ್ಕೆ ಇದೇ ವೇಳೆ ತರಲಾಗಿದೆ. ಈ ಬಾರಿ 2.25 ಲಕ್ಷ ಕ್ಯುಸೆಕ್ಸ್‌ ನೀರನ್ನು ತಮಿಳುನಾಡಿಗೆ ಮಂಗಳವಾರದ ತನಕ ಹರಿಸಲಾಗಿದೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ನೀರು ಹರಿಸಲಾಗಿದೆ. ಮಳೆ ಸ್ವಲ್ಪ ತಗ್ಗಿದ ಕಾರಣಕ್ಕೆ 1.45 ಲಕ್ಷ ಕ್ಯುಸೆಕ್ಸ್‌ ನೀರು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಉತ್ತಮ ಮಳೆಯಾಗುತ್ತಿರುವ ಕಾರಣಕ್ಕೆ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯದಲ್ಲಿ ನೀರನ್ನು ಸಂಗ್ರಹ ಮಾಡದೆ ಹೊರ ಬಿಡಲಾಗುತ್ತಿದೆ. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕು. ನದಿ ಬಳಿ ಹೋಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್