ಪೋಕ್ಸೋ ಪ್ರಕರಣದಲ್ಲಿ ವಚನ ಶ್ರೀಗೆ 5 ಗಂಟೆಗಳ ವಿಚಾರಣೆ; ಬಳಿಕ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಏನಾಯಿತು?

Kannadaprabha News   | Kannada Prabha
Published : May 15, 2026, 05:18 AM IST
POCSO: Harihara Panchamasali Peethada Vachana Sri 5 hour interrogation, medical examination

ಸಾರಾಂಶ

ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಆರೋಪದ ಮೇಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ತಾನು ಕಾನೂನಿಗೆ ಸಹಕರಿಸಿದ್ದೇನೆ ಮತ್ತು ಸತ್ಯಕ್ಕೆ ಜಯ ಸಿಗಲಿದೆ ಎಂದು ಶ್ರೀಗಳು ಹೇಳಿದ್ದಾರೆ.

 ಹರಿಹರ (ಮೇ.15): ಮಕ್ಕಳ ಮೇಲೆ ಲೈಂಗಿಕ ಕಿರುಕುಳದ ದೂರಿನನ್ವಯ ಇಲ್ಲಿನ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಅವರನ್ನು ಹರಿಹರ ಗ್ರಾಮೀಣ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿ, ನಂತರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಮಠಕ್ಕೆ ಕಳುಹಿಸಿ ಕೊಡಲಾಯಿತು.

2024ರ ಮಾ.20ರಂದು ಮಠದ ವಿದ್ಯಾರ್ಥಿ ನಿಲಯದಲ್ಲಿ, ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಮಹಿಳೆಯೊಬ್ಬರು ದೂರು ನೀಡಿದ್ದರು. ವಿಚಾರಣೆ ಸಮಯದಲ್ಲಿ ಪೊಲೀಸರು ಕೇಳಿದ 50ಕ್ಕೂ ಅಧಿಕ ಪ್ರಶ್ನೆಗಳಿಗೆ ವಚನ ಶ್ರೀ ಉತ್ತರಿಸಿದ್ದಾರೆಂದು ತಿಳಿದುಬಂದಿದೆ. ನಾನು ಕಾನೂನನ್ನು ಗೌರವಿಸಿ ವಿಚಾರಣೆಗೆ ಸಹಕರಿಸಿದ್ದೇನೆ. ಸತ್ಯಕ್ಕೆ ಯಾವಾಗಲೂ ಜಯ ಎಂದು ವಚನಾನಂದ ಶ್ರೀ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ವೈದ್ಯಕೀಯ ತಪಾಸಣೆ:

ವಿಚಾರಣೆ ಮುಗಿದ ನಂತರ, ನಗರದ ದಾಮೋದರ ಮಂಜುನಾಥ ಪೈ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಶ್ರೀಗಳು ದೈಹಿಕವಾಗಿ ಸದೃಢರಾಗಿದ್ದು, ಅವರ ಉಗುರು, ಕೂದಲು ಸೇರಿದಂತೆ ತಪಾಸಣೆಗೆ ಬೇಕಾದ ಮಾದರಿಗಳನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಭಕ್ತರ ದಂಡು:

ಠಾಣೆಗೆ ವಿಚಾರಣೆಗಾಗಿ ಶ್ರೀ ಅವರನ್ನು ಕರೆ ತಂದಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ಠಾಣೆಯ ಎದುರು ಭಕ್ತರು ಶ್ರೀಗಳ ಪರವಾಗಿ ಜಯಘೋಷ ಹಾಕಿ, ಟ್ರಸ್ಟ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಕ್ಕಳು ಕೇಸರಿ ಶಾಲು ಹಾಕಬೇಕು ಎನ್ನುವ ಬಿಜೆಪಿಗರು ತಮ್ಮ ಮಕ್ಕಳಿಗೇಕೆ ಹಾಕ್ಸಲ್ಲ? ಮಧು ಬಂಗಾರಪ್ಪ ಕಿಡಿ
ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಎಐ ಬಳಸಿ ಫೋಟೋ ವಿಡಿಯೋ, ಒಂದು ವಾರದೊಳಗೆ ತೆಗೆಯಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ