ಇಂದಿನಿಂದ ಪೋಡಿ ದುರಸ್ತಿ ಅಭಿಯಾನ: ಸಚಿವ ಕೃಷ್ಣ ಬೈರೇಗೌಡ

Published : Nov 30, 2024, 09:01 AM IST
ಇಂದಿನಿಂದ ಪೋಡಿ ದುರಸ್ತಿ ಅಭಿಯಾನ: ಸಚಿವ ಕೃಷ್ಣ ಬೈರೇಗೌಡ

ಸಾರಾಂಶ

ಪೋಡಿ ದುರಸ್ತಿಗಾಗಿ ಭೂಮಿಗೆ ಸಂಬಂಧಿಸಿದ ದಾಖಲೆಯ ನಮೂನೆ 1ರಿಂದ 5 ಮತ್ತು 6ರಿಂದ 10ನ್ನು ಸರಿಪಡಿಸಬೇಕಿದೆ. ಅದರಂತೆ ಈಗಾಗಲೇ 1. 1.96 ಲಕ್ಷ ಸರ್ವೇ ಸಂಖ್ಯೆಗಳ ಪೈಕಿ 27,107 ಸರ್ವೇ ಸಂಖ್ಯೆಗಳ ನಮೂನೆ 1ರಿಂದ 5ನ್ನು ಆನ್‌ಲೈನ್ ಮೂಲಕ ದಾಖಲಿಸುವ ಕಾರ್ಯ ಪೂರ್ಣಗೊಂಡಿದೆ. ಇನ್ನೊಂದು ತಿಂಗಳಲ್ಲಿ ಉಳಿದ ಸರ್ವೇ ಸಂಖ್ಯೆಯ ನಮೂನೆ 1ರಿಂದ 5ನ್ನು ದಾಖಲಿಸುವ ಕಾರ್ಯ ಪೂರ್ಣಗೊಳ್ಳಲಿದೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು(ನ.30):  ಸರ್ಕಾರಿಂದ ಮಂಜೂರಾದ ಭೂಮಿಗಳ ಪೋಡಿ ದಾಖಲೆ ದುರಸ್ತಿ ಅಭಿಯಾನ ಶನಿ ವಾರದಿಂದ ಆರಂಭಿಸಲಾಗು ತ್ತಿದ್ದು, ಈ ಕ್ರಮದಿಂದ ರಾಜ್ಯದ 20ರಿಂದ 25 ಲಕ್ಷ ರೈತ ಕುಟುಂಬ ಗಳಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಸರೆನ್ ಮೂಲಕ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 1.96 ಲಕ್ಷ ಸರ್ಕಾರಿ ಸರ್ವೇ ಸಂಖ್ಯೆಯಲ್ಲಿ ಭೂರಹಿತ ರೈತರಿಗೆ ಸರ್ಕಾರಿ ಭೂಮಿ ಮಂಜೂರು ಮಾಡಲಾಗಿದೆ. ಕಳೆದ 30ರಿಂದ 40 ವರ್ಷಗಳ ಹಿಂದೆಯೇ ಈ ಭೂಮಿ ಮಂಜೂರು ಮಾಡಲಾಗಿದ್ದರೂ, ಪೋಡಿ ದುರಸ್ತಿ ಮಾಡಿಲ್ಲ. ಇದರಿಂದ ಭೂಮಿ ಪಡೆದವರಿಗೆ ಪಹಣಿ ಸೇರಿದಂತೆ ಮತ್ತಿತರ ವಿಚಾರದಲ್ಲಿ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಪೋಡಿ ದುರಸ್ತಿ ಕಾರ್ಯವನ್ನು ಆರಂಭಿಸಲಾಗುತ್ತಿದ್ದು, ಶನಿವಾರ ಹಾಸನದಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು. 

ಒಂದು ಪೋಡಿಗೆ 40 ಸಾವಿರ ಲಂಚ ಕೊಡಬೇಕಿದೆ: ಡಿ.ಕೆ.ಶಿವಕುಮಾರ್‌ ಕಿಡಿ

ಪೋಡಿ ದುರಸ್ತಿಗಾಗಿ ಭೂಮಿಗೆ ಸಂಬಂಧಿಸಿದ ದಾಖಲೆಯ ನಮೂನೆ 1ರಿಂದ 5 ಮತ್ತು 6ರಿಂದ 10ನ್ನು ಸರಿಪಡಿಸಬೇಕಿದೆ. ಅದರಂತೆ ಈಗಾಗಲೇ 1. 1.96 ಲಕ್ಷ ಸರ್ವೇ ಸಂಖ್ಯೆಗಳ ಪೈಕಿ 27,107 ಸರ್ವೇ ಸಂಖ್ಯೆಗಳ ನಮೂನೆ 1ರಿಂದ 5ನ್ನು ಆನ್‌ಲೈನ್ ಮೂಲಕ ದಾಖಲಿಸುವ ಕಾರ್ಯ ಪೂರ್ಣಗೊಂಡಿದೆ. ಇನ್ನೊಂದು ತಿಂಗಳಲ್ಲಿ ಉಳಿದ ಸರ್ವೇ ಸಂಖ್ಯೆಯ ನಮೂನೆ 1ರಿಂದ 5ನ್ನು ದಾ ಲಿಸುವ ಕಾರ್ಯ ಪೂರ್ಣಗೊಳ್ಳಲಿದೆ.

ಉಳಿದಂತೆ ನಮೂನೆ 6ರಿಂದ 10 ಸರ್ವೇ ಕಾರ್ಯಕ್ಕೆ ಸಂಬಂಧಿಸಿದ್ದಾಗಿದ್ದು, ನಮೂನೆ 1ರಿಂದ 3ರ ದಾಖಲೆ ಆನ್‌ಲೈನ್‌ನಲ್ಲಿ ದಾಖಲಿಸಿದ ನಂತರ ಸರ್ವೇ ಕಾರ್ಯ ಆರಂಭಿಸಲಾಗುವುದು. ಮುಂದಿನ 8ರಿಂದ 10 ತಿಂಗಳಲ್ಲಿ ಪೋಡಿ ದುರಸ್ತಿ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಕ್ರಮದಿಂದಾಗಿ ಸರ್ಕಾರಿ ಭೂಮಿ ಹೊಂದಿರುವ 20ರಿಂದ 25 ಲಕ್ಷ ಕುಟುಂಬಗಳಿಗೆ ಸಮರ್ಪಕ ದಾಖಲೆಗಳು ದೊರೆಯಲಿದೆ ಎಂದರು.

ಬಗರ್‌ಹುಕುಂ ಅರ್ಜಿ ವಿಲೇವಾರಿಗೆ ವೇಗ: ಸಚಿವ

ಬಗರ್‌ಹುಕುಂ ಅಡಿಯಲ್ಲಿ ಭೂಮಿ ಮಂಜೂರಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಈವರೆಗೆ ನಡೆಸಲಾದ ಪರಿಶೀಲನೆಯಲ್ಲಿ 1.26 ಲಕ್ಷ ಅರ್ಜಿಗಳು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಅದರಲ್ಲಿ ಡಿ.15ರೊಳಗೆ ರಾಜ್ಯದ ಎಲ್ಲ ಬಗರ್‌ಹುಕುಂ ಸಮಿತಿ ಮುಂದೆ ಒಟ್ಟು 5 ಸಾವಿರ ಅರ್ಜಿಗಳನ್ನು ಮಂಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜನವರಿ ವೇಳೆಗೆ ಈ ಸಂಖ್ಯೆಯನ್ನು 15ರಿಂದ 20 ಸಾವಿರಕ್ಕೆ ಏರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಇ-ಖಾತಾ ಸಮಸ್ಯೆ ನಿವಾರಣೆಗೆ ಜಂಟಿ ಕಾರ್ಯಪಡೆ

ಬಗರ್‌ಹುಕುಂ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು. ಅಲ್ಲದೆ ಸಾಗುವಳಿ ಚೀಟಿ ನೀಡುವುದಕ್ಕೂ ಮುನ್ನ ಜಮೀನಿಗೆಪೋಡಿಮಾಡಿಸಿ,ಪಹಣಿಯಲ್ಲಿ ರೈತರ ಹೆಸರು ನಮೂದಿಸಿ, ಜಮೀನು ನೋಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಲಾಗಿದೆ ಎಂದರು. 

ರಾಜ್ಯದಲ್ಲಿ ಸಲ್ಲಿಕೆಯಾದ ಬಗರ್ ಹುಕುಂ ಅರ್ಜಿಗಳಲ್ಲಿ 5ರಿಂದ 6 ಲಕ್ಷ ಅರ್ಜಿಗಳು ಅನರ್ಹ ಎಂದು ಪರಿಗಣಿಸಲಾಗಿದೆ. ಅರ್ಜಿ ಸಲ್ಲಿಸಿದ ದಿನದಂದು 18 ವರ್ಷ ತುಂಬದವರ ಹೆಸರಿನಲ್ಲಿ 26 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅದೇರೀತಿಈಗಾಗಲೇ 5 ಎಕರೆ ಭೂಮಿ ಹೊಂದಿದ್ದರೂ ಬಗರ್ ಹುಕುಂ ಭೂಮಿ ಮಂಜೂರಿಗಾಗಿ 26,922 ಅರ್ಜಿಗಳು, ಬಿ ಖರಾಬು ಭೂಮಿಯನ್ನು ಬಗರ್‌ಹುಕುಂ ಭೂಮಿ ಎಂದು 40,799 ಅರ್ಜಿಗಳು, ಅರಣ್ಯ ಪ್ರದೇಶ ಮಂಜೂರಾತಿಗೆ 1.68 ಲಕ್ಷ ಅರ್ಜಿಗಳು, ನಗರ ಪರಿಮಿತಿಯೊಳಗಿನ ಭೂಮಿ ಮಂಜೂರಾತಿಗೆ 68,561 ಅರ್ಜಿಗಳು, ಕೃಷಿಕರಲ್ಲದ 1 ಲಕ್ಷಕ್ಕೂ ಹೆಚ್ಚಿನ ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ