
ಬೆಂಗಳೂರು (ಡಿ.18): ಪಿಎಫ್ಐ ಸಂಘಟನೆ ಮೇಲೆ ಖಾಕಿ ಹದ್ದಿನ ಕಣ್ಣು ಇರಿಸಿದೆ. ಪಿಎಫ್ಐ ಕಾರ್ಯಕರ್ತರ ಚಟುವಟಿಕೆ ಮೇಲೆ ಸೂಪರ್ ಕಾಪ್ ನಿಗಾ ವಹಿಸಿದೆ.
ಬೆಂಗಳೂರು,ಮೈಸೂರು,ಹುಬ್ಬಳ್ಳಿ-ಧಾರವಾಡ,ಮಂಗಳೂರು ಬೆಳಗಾವಿ,ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯ ಗುಪ್ತವಾರ್ತೆಯಿಂದ ಪೊಲೀಸ್ ಕಮಿಷನರ್ ಗಳಿಗೆ ಸೂಚನೆ ನೀಡಲಾಗಿದೆ.
ಇಂದಿನಿಂದ ಪಿಎಫ್ಐ ನಿಂದ ದೇಶಾದ್ಯಂತ ಅಭಿಯಾನ ಆರಂಭವಾಗಿದ್ದು, ಪಿಎಫ್ಐ ಕಚೇರಿ ಹಾಗೂ ಮುಖಂಡರ ಮನೆ ಮೇಲೆ ದಾಳಿ ಖಂಡಿಸಿ ಅಭಿಯಾನ ನಡೆಸಲಾಗುತ್ತದೆ.
ಸಿಎಎ ಗದ್ದಲಕ್ಕೆ ಹಣ ಪೂರೈಕೆ: ಪಿಎಫ್ಐಗೆ ಇ.ಡಿ ದಾಳಿ ಬಿಸಿ ..
ಇಡಿ,ಎನ್ಐಎ,ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದೆ. ಬಿಜೆಪಿಯಿಂದ ಈ ಸರ್ಕಾರಿ ಸಂಸ್ಥೆ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಪಿಎಫ್ಐ,ಸಿಎಫ್ಐ ಸಂಘಟನೆಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಈ ಬಗ್ಗೆ ತಿಳಿ ಹೇಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಭಿತ್ತಿ ಪತ್ರ ಅಂಟಿಸುವುದು, ಕರ ಪತ್ರ ಹಂಚುವುದು. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟಿಸುವ ಸಾಧ್ಯತೆ ಹಿನ್ನೆಲೆ ಪಿಎಫ್ಐ ಕಾರ್ಯಕರ್ತರ ಮೇಲೆ ನಿಗಾ ಇಡಲಾಗುತ್ತಿದೆ. ಮುಂಜಾಗ್ರತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ