ವಿಜಯಲಕ್ಷ್ಮಿ ದರ್ಶನ್‌ಗೆ ಪೊಲೀಸ್ ನೋಟಿಸ್, ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ

Published : Jan 21, 2026, 01:04 PM IST
vijayalakshmi darshan

ಸಾರಾಂಶ

ಸೋಷಿಯಲ್ ಮೀಡಿಯಾದಲ್ಲಿ ಅವ್ಯಾಚ್ಯ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ, ನ್ಯಾಯಾಧೀಶರ ಮುಂದೆ 164ನೇ ಕಲಂನಡಿ ಹೇಳಿಕೆ ದಾಖಲಿಸುವಂತೆ ಅವರಿಗೆ ಸೂಚಿಸಲಾಗಿದೆ.  

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅವ್ಯಾಚ್ಯ ನಿಂದನೆ ಆರೋಪಕ್ಕೆ ಸಂಬಂಧಿಸಿದ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಪೊಲೀಸರು ಅಧಿಕೃತವಾಗಿ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ, ವಿಜಯಲಕ್ಷ್ಮಿ ಅವರ 164ನೇ ಕಲಂನಡಿ ಹೇಳಿಕೆ ದಾಖಲಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಪೊಲೀಸರು ಜಾರಿ ಮಾಡಿದ ನೋಟಿಸ್‌ನಲ್ಲಿ, ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ದಾಖಲಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ. ಅದರಂತೆ, ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಹೇಳಿಕೆಯನ್ನು ದಾಖಲಿಸಬೇಕು ಎಂದು ವಿಜಯಲಕ್ಷ್ಮಿಗೆ ಸೂಚಿಸಲಾಗಿದೆ.

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಗರದ ಸಿಸಿಬಿ (CCB) ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಳೆದ ಡಿಸೆಂಬರ್ ನಲ್ಲಿ ದೂರು ದಾಖಲಿಸಿದ್ದರು.ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು 3 ತಂಡಗಳಾಗಿ ತನಿಖೆ ಆರಂಭಿಸಿ ಮೆಟಾ ಸಂಸ್ಥೆಯಿಂದ ಕೆಟ್ಟ ಕಮೆಂಟ್ ಮಾಡಿರುವ ಖಾತೆಗಳ ಕುರಿತು ಮಾಹಿತಿ ಕೇಳಿದ್ದರು. ವಿಜಯಲಕ್ಷ್ಮಿ 18 ಖಾತೆಗಳ ವಿರುದ್ಧ ದೂರು ನೀಡಿದ್ದರು. ಈಗಾಗಲೇ ಪ್ರಕರಣ ಸಂಬಂಧ  8 ಜನರ ಬಂಧನವಾಗಿದೆ.

ನ್ಯಾಯಾಂಗ ಪ್ರಕ್ರಿಯೆ ವೇಗ

ಅವ್ಯಾಚ್ಯ ನಿಂದನೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆ, ತನಿಖೆಯನ್ನು ವೇಗಗೊಳಿಸಿರುವ ಪೊಲೀಸರು, ಪ್ರಕರಣದ ಎಲ್ಲ ಅಂಶಗಳನ್ನು ಸಮಗ್ರವಾಗಿ ದಾಖಲಿಸಲು 164 ಹೇಳಿಕೆ ಅಗತ್ಯ ಎಂದು ತಿಳಿಸಿದ್ದಾರೆ. ಈ ಹೇಳಿಕೆ ನ್ಯಾಯಾಲಯದಲ್ಲಿ ದಾಖಲಾಗುವುದರಿಂದ, ಮುಂದಿನ ನ್ಯಾಯಾಂಗ ಕ್ರಮಗಳಿಗೆ ಇದು ಪ್ರಮುಖ ದಾಖಲೆ ಆಗಲಿದೆ.

ತನಿಖೆಯ ಮುಂದಿನ ಹಂತ

ವಿಜಯಲಕ್ಷ್ಮಿ ಅವರು ನಿಗದಿತ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ನಂತರ, ಪ್ರಕರಣಕ್ಕೆ ಸಂಬಂಧಿಸಿದ ಇತರೆ ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್: ಗುಜರಾತ್ ಬಸ್‌ಗಳಿಗೆ ಕೂತಲ್ಲೇ 'FC' ಕೊಟ್ಟ ಕೋರಮಂಗಲ RTO ನಿಸಾರ್ ಅಮಾನತು!
ಜ್ಞಾನಭಾರತಿ ಇನ್ಸ್ಪೆಕ್ಟರ್ ಸಸ್ಪೆಂಡ್ ಬೆನ್ನಲ್ಲೇ 'ಹವಾಲಾ' ಸ್ಫೋಟ: 1.05 ಕೋಟಿ ಹಣದ ಜಾಲದಲ್ಲಿ ಸಿಲುಕಿದ್ರಾ ರವಿ?