
ವಿಜಯಪುರ (ಸೆ.5): ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ರಾಘವೇಂದ್ರ ಹೃದಯಾಘಾತಕ್ಕೆ ಮೃತಪಟ್ಟಿರುವ ಸಿಬ್ಬಂದಿ. ನಿನ್ನೆ ತಡರಾತ್ರಿ ತೀವ್ರ ಹೃದಯಾಘಾದಿಂದ ಸಾವು. ಮೃತ ಪೊಲೀಸ್ ಸಿಬ್ಬಂದಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. 2005ರ ಬ್ಯಾಚ್ ಪೊಲೀಸ್ ಸಿಬ್ಬಂದಿ ಆಗಿದ್ದ ರಾಘವೇಂದ್ರ. ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚಿಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದ ರಾಘವೇಂದ್ರ. ಪ್ರಮೋಷನ್ ಮೇಲೆ ಬಂದು ಕಮಲಾಪುರ ಠಾಣೆ(Kamalapur police station)ಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ರಾಘವೇಂದ್ರ ನಿಧನಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿಎಲ್, DYSP ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರಿಂದ ಕುಟುಂಬಕ್ಕೆ ಸಾಂತ್ವನ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ