
ಬೆಂಗಳೂರು(ನ.01): ಪೊಲೀಸರ ವೇತನ ಹೆಚ್ಚಿಸುವ ಔರಾದ್ಕರ್ ಸಮಿತಿ ನೀಡಿರುವ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದ್ದು, ಕಾರಣಾಂತರಗಳಿಂದ ವಿಳಂಬವಾಗಿದೆ. ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು, ಕಾನೂನಿನ ಪ್ರಕಾರವೇ ಅನುಷ್ಠಾನಮಾಡಲಾಗುವುದು. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದಿದ್ದಾರೆ.
ಪ್ರತ್ಯೇಕ ಬಸ್ ಪಥ ಕಾಮಗಾರಿ ವಿಳಂಬ: ಪ್ರಾಯೋಗಿಕ ಬಸ್ ಸಂಚಾರ ಯಾವಾಗಿಂದ..?
ಈ ಸಮಿತಿ ಇನ್ನೊಂದು ವರದಿ ನೀಡುವ ಸಾಧ್ಯತೆ ಇದೆ. ಎಲ್ಲ ಇಲಾಖೆಗೂ ಒಂದೇ ಕಾನೂನು ಇದೆ. ಅದೇ ರೀತಿ ಒಂದೇ ಮಾದರಿಯ ವೇತನ ನೀಡಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ, ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.
ಪೊಲೀಸ್ ನೇಮಕಾತಿ ವಯಸ್ಸು ಹೆಚ್ಚಳ ಮನವಿಗೆ ಸಿಎಂ ಸ್ಪಂದನೆ.
ರಾಘವೇಂದ್ರ ಔರಾದ್ಕರ್ ವರದಿ ಜಾರಿ ವಿಳಂಬದಿಂದ ಅಸಮಾಧಾನಗೊಂಡಿರುವ ಪೊಲೀಸ್ ಸಿಬ್ಬಂದಿ ಸಮಾಧಾನಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಆದೇಶ ಕೈಗೊಂಡಿತ್ತು. ಆದರೆ ಪೇದೆಯಿಂದ ಹಿಡಿದು ಪೊಲೀಸ್ ಇನ್ಸ್ಪೆಕ್ಟರ್ವರೆಗೆ ಅನ್ವಯವಾಗುವಂತೆ ನಿಗದಿಪಡಿಸಿ ಹೊರಡಿಸಿರುವ ಮಾಸಿಕ ಕಷ್ಟಪರಿಹಾರ ಹಾಗೂ ವಿಶೇಷ ಭತ್ಯೆ ಹೆಚ್ಚಳ ಕುರಿತ ಆದೇಶವು ನಿಯೋಜನೆ ಮೇರೆಗೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಅನ್ವಯಯಿಸುವುದಿಲ್ಲ ಎಂಬ ಅಂಶಗಳನ್ನೊಳಗೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ