ಕೊರೋನಾ ಭೀತಿ ನಡುವೆ ಮದ್ಯ ಮಾರಾಟ; ಸಂಕಷ್ಟದಲ್ಲಿ ಪೊಲೀಸರು!

Suvarna News   | Asianet News
Published : May 05, 2020, 05:44 PM IST
ಕೊರೋನಾ ಭೀತಿ ನಡುವೆ ಮದ್ಯ ಮಾರಾಟ; ಸಂಕಷ್ಟದಲ್ಲಿ ಪೊಲೀಸರು!

ಸಾರಾಂಶ

ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಇದು ಪೊಲೀಸರ ಚಿಂತೆ ಹೆಚ್ಚಿಸಿದೆ. ಮದ್ಯ ಮಾರಾಟದಿಂದ ಪೊಲೀಸರಿಗೆ ತಲೆನೋವು ಹೆಚ್ಚಾಗಿದ್ದು ಹೇಗೆ? ಇಲ್ಲಿದೆ.

ಬೆಂಗಳೂರು(ಮೇ.05):  ಕೊರೋನಾ ವೈರಸ್ ಕಾರಣ ಪೊಲೀಸರಿಗೆ ಡ್ರಿಂಕ್ ಅಂಡ್ ಡ್ರೈವ್ ಕೇಸ್ ತಪಾಸಣೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಯಾಣಿಕರಿಗೆ ಕೊರೋನಾ ತಗುಲುವ ಭೀತಿಯಿಂದ ಪೊಲೀಸರು ಹಾಲ್ಕೋ ಮೀಟರ್ ಮೂಲಕ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಪ್ರಮಾಣ ಕಡಿಮೆ ಮಾಡಿದ್ದಾರೆ.  ಆದರೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಕಾರಣ ಇದೀಗ ಪೊಲೀಸರಿಗೆ ಸಂಕಷ್ಟ ಎದುರಾಗಿದೆ. 

ಕೊರೋನಾ ಸೋಂಕಿತ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟ್ರಿಯೇ ಭಯಾನಕ..!.

ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಿಸುವ ಕಾರಣ ಪೊಲೀಸರು ಕುಡಿದು ವಾಹನ ಚಲಾಯಿಸೋರ ತಪಾಸಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹಾಲ್ಕೋ ಮೀಟರ್ ವಾಹನ ಸವಾರರ ಬಾಯಿಗಿಟ್ಟ ತಪಾಸಣೆ ಮಾಡಬೇಕು. ಈ ರೀತಿ ಚೆಕಿಂಗ್ ಕೊರೋನಾ ವೈರಸ್ ಇರುವ ವರೆಗೆ ಅಪಾಯಕಾರಿಯಾಗಿದೆ. ಕೊರೋನಾ ವೈರಸ್ ತಡೆಗೆ ಸಾಮಾಜಿಕ ಅಂತರ ತುಂಬಾ ಮುಖ್ಯ. ಹೀಗಾಗಿ ವಾಹನ ಸವಾರರ ಬಾಯಿಗೆ ಹಾಲ್ಕೋ ಮೀಟರ್ ಇಟ್ಟ ಚೆಕ್ ಮಾಡುವುದ ಅಪಾಯ ಅನ್ನೋ ಕಾರಣಕ್ಕೆ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಕಡಿಮೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಂದ 89 ಸಾವಿರ ರೂ ದಂಡ ವಸೂಲಿ!.

ಲಾಕ್‌ಡೌನ್ ಸಡಿಲಿಕೆ ಹಾಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವುದರಿಂದ ಇದೀಗ ಪೊಲೀಸರ ತಲೆ ನೋವು ಹೆಚ್ಚಾಗಿದೆ. ಕುಡಿದು ವಾಹನ ಚಲಾಯಿಸುವವರನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ. ಹೀಗಾಗಿ ಪೊಲೀಸರು ಅನುಮಾನ ಬಂದರೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ. 

ಮದ್ಯ ಮಾರಾಟಕ್ಕೆ ಅವಕಾಶ ಸಿಗುತ್ತಿದ್ದಂತೆ ಕುಡುಕರು ದಾರಿಗಳಲ್ಲಿ ತೂರಾಡುತ್ತಿದ್ದಾರೆ. ಇತ್ತ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ರಾತ್ರಿ ಕುಡಿದು ಲಾಂಗ್ ಡ್ರೈವ್ ಸೇರಿದಂತೆ ಆಟಾಟೋಪಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಕೇಸ್ ದಾಖಲಿಕೊಳ್ಳಲು ನಿರ್ಧರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!