ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ 2%ಗಿಂತ ಕೆಳಕ್ಕೆ

Kannadaprabha News   | Asianet News
Published : Sep 07, 2021, 07:58 AM IST
ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ 2%ಗಿಂತ ಕೆಳಕ್ಕೆ

ಸಾರಾಂಶ

ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಪಾಸಿಟಿವಿಟಿ ದರ ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ

 ಬೆಂಗಳೂರು (ಸೆ.07): ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಮತ್ತು ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ ದಾಖಲಾಗುವುದರೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ದಕ್ಷಿಣ ಕನ್ನಡ ಮತ್ತು ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಈಗ ಪಾಸಿಟಿವಿಟಿ ದರ ಇಳಿಕೆಯಾಗಿದೆ. ಹೀಗಾಗಿ ಜನರಲ್ಲಿ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿದೆ.

ಕರ್ನಾಟಕದಲ್ಲಿ ಕೊರೋನಾ ಏರಿಳಿತ, ಇಂದು (ಸೆ.7) ಭಾರೀ ಇಳಿಕೆ

ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಪಾಸಿಟಿವಿಟಿ ದರ ದಾಖಲಾಗುತ್ತಿತ್ತು. ಆಗಸ್ಟ್‌ ಕೊನೆಯ ವಾರದ ಹೊತ್ತಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಹೊರತು ಪಡಿಸಿ ಉಳಿದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಆಗಿತ್ತು. ಆದರೆ ಕೇರಳದೊಂದಿಗೆ ಹೆಚ್ಚು ನಂಟು ಹೊಂದಿರುವ ಗಡಿ ಜಿಲ್ಲೆಗಳಾದ ಕೊಡಗು ಮತ್ತು ದಕ್ಷಿಣ ಕನ್ನಡದಲ್ಲಿ ಪಾಸಿಟಿವಿಟಿ ದರ ನಿರೀಕ್ಷಿತ ಪ್ರಮಾಣದಲ್ಲಿ ಇಳಿಯುತ್ತಿರಲಿಲ್ಲ. ಆದರೆ ಈಗ ಸೆಪ್ಟೆಂಬರ್‌4ರ ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿಸಿದೆ.

ರಾಜ್ಯ ಸರ್ಕಾರ ಕಫä್ರ್ಯ ವಿನಾಯಿತಿ, ಶಾಲೆ ಆರಂಭ, ಗಣೇಶೋತ್ಸವ ಆಚರಣೆ ಮುಂತಾದ ಚಟುವಟಿಕೆಗಳ ನೀತಿ ನಿಯಮ ರೂಪಿಸುವಾಗ ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಪರಿಗಣಿಸುತ್ತಿತ್ತು. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸದ್ಯ ಉಡುಪಿ (ಶೇ. 1.31), ಹಾಸನ (ಶೇ.1.21), ಮೈಸೂರು (ಶೇ.1.13), ಕೋಲಾರ (ಶೇ.1.11), ಶಿವಮೊಗ್ಗ (ಶೇ. 0.92), ಚಿಕ್ಕಮಗಳೂರು (ಶೇ.0.89), ಉತ್ತರ ಕನ್ನಡ (ಶೇ.0.73) ಜಿಲ್ಲೆಯಲ್ಲಿ ಪಾಸಿಟಿವಿಟಿ ದರವಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ.0.71ಕ್ಕಿಂತ ಹೆಚ್ಚು ಸೋಂಕಿನ ದರ ಹೊಂದಿದೆ.

11 ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಏರಿಕೆ:

ಈ ಮಧ್ಯ ಕಡಿಮೆ ಕೊರೋನಾ ಪ್ರಕರಣ ದಾಖಲಾಗುತ್ತಿದ್ದ ಜಿಲ್ಲೆಗಳಲ್ಲಿ ಸೆ.4ರ ಬಳಿಕ ಸೋಂಕಿನ ಪ್ರಕರಣದಲ್ಲಿ ಏರಿಕೆಯಾಗುತ್ತಿರುವುದು ಕೊಂಚ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ಕೋಲಾರ, ಧಾರವಾಡ, ಗದಗ, ರಾಮನಗರ, ಕೊಡಗು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯಪುರ, ಕೊಪ್ಪಳ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಉಳಿದಂತೆ ರಾಜ್ಯದಲ್ಲಿ ಪ್ರತಿದಿನ ಹೆಚ್ಚು ಪ್ರಕರಣ ವರದಿಯಾಗುವ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ ದಾಖಲಾಗಿದೆ. 18 ಜಿಲ್ಲೆಯಲ್ಲಿ ಕಡಿಮೆ ಪ್ರಕರಣ ಬಂದಿದೆ. ಹಾವೇರಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಸ್ಥಿರವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್