ಗಣೇಶನಿಗೆ ಕಲ್ಲೆಸೆದವರ ಮಸೀದಿಗೆ ಜೆಸಿಬಿ ನುಗ್ಗಿಸಿ ಎಂದ ಮಹೇಶ್ ವಿಕ್ರಂ ಹೆಗ್ಡೆ; ಕೇಸ್ ಹಾಕಿ ಜೈಲಿಗಟ್ಟಿದ ಸರ್ಕಾರ!

Published : Sep 12, 2025, 09:13 PM IST
Mahesh Vikram hegde

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ 'ಪೋಸ್ಟ್ ಕಾರ್ಡ್' ಸುದ್ದಿ ಸಂಸ್ಥೆಯ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯವರನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿಗಳ ಫೋಟೋ ಬಳಸಿ ಕೋಮು ಪ್ರಚೋದನೆಗೆ ಯತ್ನಿಸಿದ್ದಾರೆಂಬ ಆರೋಪದ ಮೇಲೆ ಈ ಬಂಧನ ನಡೆದಿದೆ.

ದಕ್ಷಿಣ ಕನ್ನಡ (ಸೆ.12): ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ 'ಪೋಸ್ಟ್ ಕಾರ್ಡ್' ಸುದ್ದಿ ಸಂಸ್ಥೆಯ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯವರನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಸಿ ಕೋಮು ಪ್ರಚೋದನೆಗೆ ಯತ್ನಿಸಿದ್ದಾರೆಂಬ ಆರೋಪದ ಮೇಲೆ ಈ ಬಂಧನ ನಡೆದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಅವರನ್ನು ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆ ವಿವರ:

ಮಹೇಶ್ ವಿಕ್ರಂ ಹೆಗ್ಡೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ ಒಂದು ಪೋಸ್ಟ್ ಹಾಕಿದ್ದರು. 'ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೋರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂಥಹ ಪ್ರಕರಣ ಮರುಕಳಿಸಲ್ಲ' ಎಂದು ಆ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

ಸುಮೋಟೋ ಕೇಸ್ ದಾಖಲು:

ಈ ಪೋಸ್ಟ್ ಎರಡು ಧರ್ಮಗಳ ನಡುವೆ ದ್ವೇಷ ಮತ್ತು ವೈರತ್ವವನ್ನು ಉಂಟುಮಾಡಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಉದ್ದೇಶವನ್ನು ಹೊಂದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದ ಮೇರೆಗೆ, ಮೂಡಬಿದಿರೆ ಪಿಎಸ್‌ಐ ಕೃಷ್ಣಪ್ಪ ಅವರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353(2) ಅಡಿಯಲ್ಲಿ ಸೆಪ್ಟೆಂಬರ್ 9ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಮಹೇಶ್ ವಿಕ್ರಂ ಹೆಗ್ಡೆ ಬಂಧನ:

ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಘಟನೆ ರಾಜಕೀಯ ವಲಯ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ವಿರುದ್ಧದ ಟೀಕೆ ಮತ್ತು ಕೋಮು ಪ್ರಚೋದನೆ ನಡುವಿನ ಗೆರೆಯ ಬಗ್ಗೆ ಇದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭವಿಷ್ಯದಲ್ಲಿ ಇಂತಹ ಪೋಸ್ಟ್‌ಗಳ ಕುರಿತು ಸರ್ಕಾರ ಯಾವ ನಿಲುವು ತಳೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!