ಹಾವೇರಿಯಲ್ಲಿ ನಿರ್ಮಾಣವಾಗ್ತಿದೆ ಪುನೀತ್ ರಾಜಕುಮಾರ ದೇವಸ್ಥಾನ!

Published : Aug 16, 2024, 09:38 PM IST
ಹಾವೇರಿಯಲ್ಲಿ ನಿರ್ಮಾಣವಾಗ್ತಿದೆ ಪುನೀತ್ ರಾಜಕುಮಾರ ದೇವಸ್ಥಾನ!

ಸಾರಾಂಶ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಇಂದಿಗೆ ಭರ್ತಿ ಮೂರು ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳು ಹೃದಯದಲ್ಲಿನ್ನೂ ಜೀವಂತ. ಅಪ್ಪುವನ್ನು ದಿನ ಸ್ಮರಿಸೋ, ಪೂಜಿಸೋ ಅದೇಷ್ಟೋ ಜೀವನಗಳಿವೆ. ಅವರಲ್ಲೊಬ್ಬ ಹಾವೇರಿ ಜಿಲ್ಲೆಯ ಪ್ರಕಾಶ್.  ದಿ. ಪುನೀತ್ ರಾಜಕುಮಾರ್ ಅವರನ್ನ ದೇವರಂತೆ ಆರಾಧಿಸುವ ಪ್ರಕಾಶ್ ಅಪ್ಪುಗಾಗಿ ದೇವಾಲಯವನ್ನೇ ನಿರ್ಮಿಸಿದ್ದಾನೆ.

ಹಾವೇರಿ (ಆ.16): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಇಂದಿಗೆ ಭರ್ತಿ ಮೂರು ವರ್ಷಗಳೇ ಕಳೆದಿವೆ. ಆದರೂ ಅಭಿಮಾನಿಗಳು ಹೃದಯದಲ್ಲಿನ್ನೂ ಜೀವಂತ. ಅಪ್ಪುವನ್ನು ದಿನ ಸ್ಮರಿಸೋ, ಪೂಜಿಸೋ ಅದೇಷ್ಟೋ ಜೀವನಗಳಿವೆ. ಅವರಲ್ಲೊಬ್ಬ ಹಾವೇರಿ ಜಿಲ್ಲೆಯ ಪ್ರಕಾಶ್.  ದಿ. ಪುನೀತ್ ರಾಜಕುಮಾರ್ ಅವರನ್ನ ದೇವರಂತೆ ಆರಾಧಿಸುವ ಪ್ರಕಾಶ್ ಅಪ್ಪುಗಾಗಿ ದೇವಾಲಯವನ್ನೇ ನಿರ್ಮಿಸಿದ್ದಾನೆ.

ಹೌದು. ಹಾವೇರಿ ಜಿಲ್ಲೆಯಲ್ಲಿ  ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್‌ಗಾಗಿ ಅಭಿಮಾನಿ ಪ್ರಕಾಶ್ ದೇವಸ್ಥಾನವನ್ನೇ ಕಟ್ಟಿಸಿ ಅಭಿಮಾನ ಮೆರೆದಿದ್ದಾನೆ. ತಾಲೂಕಿನ ಯಲಗುಚ್ಚ ಗ್ರಾಮದವರಾದ ಪ್ರಕಾಶ. ವೃತ್ತಿಯಲ್ಲಿ ಮಾಸ್ಟರ್ ಆಗಿದ್ದಾನೆ.  ಅಪ್ಪು ಎಂದರೆ ಈತನಿಗೆ ಪಂಚಪ್ರಾಣ. ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಜೊತೆಗೆ ಸಿನಿಮಾದಲ್ಲಿ ನಟಿಸಬೇಕು ಎಂದು ಕನಸು ಕಂಡಿದ್ದ ಅಭಿಮಾನಿ.  ಈ ವಿಚಾರವಾಗಿ ಹಲವು ಬಾರಿ ಪುನೀತ್ ರಾಜಕುಮಾರ್ ಭೇಟಿಗೆ ತೆರಳಿದ್ದರೂ ಅಂದು ಸಾಧ್ಯವಾಗಿರಲಿಲ್ಲ. ದೂರದಿಂದ ನೋಡಿದ ತೃಪ್ತಿಯೊಂದಿಗೆ ಮನೆಗೆ ವಾಪಸ್ ಆಗಿದ್ದ ಅಭಿಮಾನಿ.

 

ರಾಜ್​ ಅಭಿಮಾನಿಯಂತ ಹುಡುಗಿನ ನೋಡದೇ ಮದ್ವೆಯಾದೆ: ಲವ್​ಸ್ಟೋರಿಗೆ ಅಪ್ಪು ಭಾವುಕ- ಹಳೆ ವಿಡಿಯೋ ವೈರಲ್​

 ಆದರೆ ಮುಂದೊಮ್ಮೆ ಅಪ್ಪು ಜೊತೆ ನಟಿಸಬೇಕು ಎಂಬ ಆಸೆ ಜೀವಂತ ಇತ್ತು. ಇದೇ ವೇಳೆಗೆ ಪುನೀತ್ ರಾಜಕುಮಾರ ಹೃದಯಾಘಾತದಿಂದ ಅಕಾಲಿಕವಾಗಿ ನಿಧನದೊಂದಿಗೆ ಪ್ರಕಾಶ ಕನಸು ಕೂಡ ನುಚ್ಚುನೂರಾಯ್ತು. ಅಪ್ಪು ನಿಧನದಿಂದ ತೀವ್ರ ನೊಂದಿದ್ದ ಪ್ರಕಾಶ. ಹೀಗಾಗಿ ಪುನೀತ್ ರಾಜಕುಮಾರ ನೆನಪಿಗಾಗಿ ದೇವಸ್ಥಾನ ನಿರ್ಮಾಣ ಮಾಡಲು ಮುಂದಾಗಿದ್ದ ಅಭಿಮಾನಿ. ಇದೀಗ ಸುಮಾರು ಐದು ಲಕ್ಷ ರೂಪಾಯಿ ಖರ್ಚು ಮಾಡಿ ಚಿಕ್ಕದಾದ ದೇವಸ್ಥಾನವನ್ನು ಕೊನೆಗೂ ನಿರ್ಮಾಣ ಮಾಡಿದ್ದಾನೆ. ಎಲ್ಲ ಕಾರ್ಯ ಮುಗಿದಿದ್ದು, ದೇವಸ್ಥಾನಕ್ಕೆ ಅಂತಿಮ ಸ್ಪರ್ಶ ನೀಡಲಾಗ್ತಿದೆ. ಸದ್ಯ ಡಾ. ಪುನೀತ್ ರಾಜಕುಮಾರ ಪ್ರತಿಮೆ ಮಾಡಿಸಲಾಗುತ್ತಿದೆ. ಪ್ರತಿಮೆ ಪೂರ್ಣಗೊಂಡ ಬಳಿಕ ದೇವಸ್ಥಾನದೊಳಗೆ ಪ್ರತಿಷ್ಠಾಪಿಸಿ ದಿ.ಪುನೀತ್ ರಾಜ್‌ಕುಮಾರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ ಅವರಿಂದಲೇ ಉದ್ಘಾಟನೆ ಮಾಡಿಸಲು ಮುಂದಾಗಿರುವ ಅಭಿಮಾನಿ ಪ್ರಕಾಶ್. ಈಗಾಗಲೇ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಭೇಟಿ ಮಾಡಿ ಉದ್ಘಾಟನೆಗೆ ಆಹ್ವಾನಿಸಿರುವ ಪ್ರಕಾಶ್.

20 ವಯಸ್ಸಿಗೆ ನಟನೆ ಸಾಕು ಅಂದ್ರು ಅಮ್ಮ... ಮದುವೆ ಮಾಡಿದ್ರು... ಆದ್ರೆ... ನೋವಿನ ದಿನಗಳ ನೆನೆದ ಸುಧಾರಾಣಿ

ಎಲ್ಲವೂ ಅಂದುಕೊಂಡಂತೆ ಆದರೆ ಇದೇ ತಿಂಗಳಲ್ಲೇ ಪುನೀತ್ ರಾಜಕುಮಾರ ದೇವಾಲಯ ಉದ್ಘಾಟನೆಯಾಗಲಿದೆ. ದೇವಾಲಯ ನಿರ್ಮಾಣದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು ನಾಡಿನಾದ್ಯಂತ ಅಪ್ಪು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ನಮ್ಮ ಅಪ್ಪು ಯಾವತ್ತೂ ಜೀವಂತ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್