
ಬೆಂಗಳೂರು (ಏ.3): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿರುವ ಆರೋಪಿ ಹಾಗು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದರು. ಪ್ರಕರಣದಿಂದ ಖುಲಾಸೆಗೊಳಿಸುವಂತೆ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಕೆ.ಆರ್.ನಗರ ಮಹಿಳೆ ದಾಖಲಿಸಿದ್ದ ದೂರಿಗೆ ಸಂಬಂಧಿಸಿದ ಕೇಸ್ ಇದಾಗಿದ್ದು, ಇದೇ ವೇಳೆ ಪ್ರಜ್ವಲ್ ಮೇಲಿರುವ ಆರೋಪವನ್ನು ಜಡ್ಜ್ ಓದಿದರು. ಆರೋಪಗಳು ಏನಿದೆ ಎಂದು ಆರೋಪಿ ಪ್ರಜ್ವಲ್ ಗೆ ನ್ಯಾಯಾಧೀಶರು ತಿಳಿಸಿದರು. ಜಡ್ಜ್ ಆರೋಪ ಓದುತ್ತಿದ್ದ ವೇಳೆ ತಲೆ ಅಲ್ಲಾಡಿಸುತ್ತಾ ಆರೋಪ ಅಲ್ಲಗಳೆದ ಪ್ರಜ್ವಲ್ ಕಣ್ಣೀರು ಹಾಕಿದರು.
ಪ್ರಜ್ವಲ್ ಜೈಲಿನಿಂದ ಬರೋದು ಯಾವಾಗ ಅನ್ನೋದನ್ನ ಹೇಳಿ ಒಟ್ಟಿಗೆ ಸೇರಿ ಸ್ವಾಗತಿಸೋಣ ಎಂದ ಸೂರಜ್ ರೇವಣ್ಣ!
ಆರೋಪ ಮುಕ್ತ ಅಪ್ಲೀಕೇಷನ್ ವಜಾಗೊಳಿಸಿ ಆರೋಪ ನಿಗದಿ ಮಾಡುವ ಮೂಲಕ ಟ್ರಯಲ್ ಆರಂಭಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದರು. ಕೆ.ಆರ್.ನಗರದ ಮಹಿಳೆ ನೀಡಿದ್ದ ಪ್ರಕರಣ ವಿಚಾರಣೆ ಏ.09ಕ್ಕೆ ಮುಂದೂಡಿಕೆ ಮಾಡಲಾಯ್ತು. ಇನ್ನು ಹಾಸನ ಜಿಲ್ಲೆಯ ಮಾಜಿ ಜನಪ್ರತಿನಿಧಿಯೊಬ್ಬರು ನೀಡಿದ್ದ ಮತ್ತೊಂದು ಪ್ರಕರಣವನ್ನು ಖುಲಾಸೆ ಅರ್ಜಿ ವಿಚಾರಣೆಯನ್ನು ಏ.16ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣಗೆ ತನ್ನದೇ ವಿಡಿಯೋ, ಫೋಟೋ ನೋಡಲು ಕೋರ್ಟ್ ಅನುಮತಿ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಕೆ.ಆರ್.ನಗರ ಮಹಿಳೆಯನ್ನು ಅಪಹರಿಸಿದ ಆರೋಪ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ , ಭವಾನಿ ರೇವಣ್ಣ ಕೂಡ ಕೇಸ್ ಎದುರಿಸುತ್ತಿದ್ದಾರೆ. ಆದರೆ ಬೇಲ್ ಮೇಲೆ ಹೊರಗಡೆ ಇದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ