ರಾಜ್ಯ ರಾಜಕೀಯ ಅಸಹ್ಯಕರ: ಪ್ರಮೋದ್ ಮುತಾಲಿಕ್ ಗುಡುಗು!

Published : Feb 10, 2019, 05:22 PM ISTUpdated : Feb 10, 2019, 06:04 PM IST
ರಾಜ್ಯ ರಾಜಕೀಯ ಅಸಹ್ಯಕರ: ಪ್ರಮೋದ್ ಮುತಾಲಿಕ್ ಗುಡುಗು!

ಸಾರಾಂಶ

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್| ರಾಜ್ಯ ರಾಜಕೀಯ ಅಸಹ್ಯಕರ ಎಂದ ಶ್ರೀರಾಮಸೇನೆ ಮುಖ್ಯಸ್ಥ| ಮೂರೂ ಪಕ್ಷಗಳನ್ನು ತಿರಸ್ಕರಿಸುವ ಕಾಲ ಸನ್ನಿಹಿತ ಎಂದ ಮುತಾಲಿಕ್| ಹಿಂದುತ್ವ ಮರೆತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ಕರೆ| ಜನರ ತೆರಿಗೆ ಹಣದಿಂದ ರೆಸಾರ್ಟ್ ರಾಜಕೀಯ ಎಂದು ಗುಡುಗಿದ ಮುತಾಲಿಕ್ 

ಉಡುಪಿ(ಫೆ.10): ರಾಜ್ಯ ರಾಜಕೀಯ ಅಸಹ್ಯವಾಗಿದ್ದು, ದೇಶ ಹಾಗೂ ರಾಜ್ಯದ ಅಭಿವೃದ್ಧಿ ಹಿತಾದೃಷ್ಠಿಯಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನರು ತಿರಸ್ಕರಿಸುವ ಕಾಲ ಸನ್ನಿಹಿತವಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ಧರ್ಮ ಸಭೆಯ ಅಂಗವಾಗಿ ಉಡುಪಿಗೆ ಆಗಮಿಸಿರುವ ಮುತಾಲಿಕ್, ಒಬ್ಬರು ಆಡಿಯೋ ಬಿಡುಗಡೆ ಮಾಡುತ್ತಾರೆ. ಇನ್ನೊಬ್ಬರು ನಾಳೆ ವೀಡಿಯೊ ಬಿಡುಗಡೆ ಮಾಡುತ್ತೇನೆ ಎನ್ನುತ್ತಾರೆ. ಇಂತಹ ಹೊಲಸು ರಾಜಕೀಯ ವಾತಾವರಣದಲ್ಲಿ ನಾವು ಬದುಕುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

"

ಇದೇ ವೇಳೆ ಬಿಜೆಪಿ ವಿರುದ್ಧ ಗುಡುಗಿದ ಮುತಾಲಿಕ್, ನಿಮ್ಮ ಬಳಿ ವೀಡಿಯೋ ಇದ್ದು ಮೊದಲೇ ಯಾಕೆ ಬಿಡುಗಡೆ ಮಾಡಿಲ್ಲ? ನೀವು ಸತ್ಯವಂತರು ಹಾಗೂ ನ್ಯಾಯದ ಪರವಾಗಿದ್ದರೆ ನ್ಯಾಯಾಲಯಕ್ಕೆ ಹೋಗಿ ಎಂದು ಸವಾಲು ಹಾಕಿದರು. 

ಜನಸಂಘ ಕಾಲದ ಬಿಜೆಪಿಯ ಪ್ರಾಮಾಣಿಕತೆ ಈಗ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದ ಮುತಾಲಿಕ್, ಹಿಂದುತ್ವದ ಹೋರಾಟ ಮರೆತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು.

"

ಜನಪ್ರತಿನಿಧಿಗಳು ಅಧಿಕಾರದ ಆಸೆಗಾಗಿ ಕೋಟಿ ಕೋಟಿ ಡೀಲ್ ಮಾಡಿಕೊಳ್ಳುತ್ತಿದ್ದಾರೆ. ಆ ಹಣ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಅಪ್ಪನ ಹಣವೇ? ಈ ರಾಜ್ಯದ ಜನ ಕೊಟ್ಟಿರುವ ತೆರಿಗೆ ಹಣ ರೆಸಾರ್ಟ್ ಮತ್ತು ಡೀಲ್‍ಗೆ ದುರುಪಯೋಗ ಆಗುತ್ತಿದೆ ಎಂದು ವಾಗ್ದಾಳಿ ಮುತಾಲಿಕ್ ನಡೆಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್