ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಪ್ರಮೋದ್ ಮುತಾಲಿಕ್

Published : Nov 06, 2020, 06:53 PM ISTUpdated : Nov 06, 2020, 07:30 PM IST
ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಪ್ರಮೋದ್ ಮುತಾಲಿಕ್

ಸಾರಾಂಶ

ದೀಪಾವಳಿ ವೇಳೆ ಪಟಾಕಿಯನ್ನು ರಾಜ್ಯ ಸರ್ಕಾರ ನಿಷೇಧಸಿದ್ದು ಇದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, (ನ.06): ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಪಟಾಕಿ ಸಿಡಿಸುವುದರಿಂದ ಪರಿಸರ ನಾಶವಾಗುತ್ತೆಂಬುದು ಸರಿಯಲ್ಲ. ಪರಿಸರ ನಾಶಕ್ಕೆ ಹಲವಾರು ಕಾರಣಗಳಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

"

ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಪಟಾಕಿಯಿಂದ ಪರಿಸರ ಮಾಲಿನ್ಯವಾಗುತ್ತೆ ಎಂಬುದು ಸುಳ್ಳು. ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯವಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಅರಣ್ಯ ಪ್ರದೇಶಗಳನ್ನು ಹೇಗೆಲ್ಲ ನಾಶಮಾಡಲಾಗುತ್ತಿದೆ ಮೊದಲು ಇಂತವುಗಳನ್ನು ಸರ್ಕಾರ ತಡೆಯಬೇಕು. ಅದನ್ನು ಬಿಟ್ಟು ವರ್ಷಕ್ಕೆ ಒಮ್ಮೆ ಬರುವ ಹಬ್ಬಗಳಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸಿಎಂ ಮಹತ್ವದ ಘೋಷಣೆ: ಈ ಬಾರಿ ದೀಪಾವಳಿ ಪಟಾಕಿ ಠುಸ್..!

ಇನ್ನು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವುದಾದರ ಒಂದು ದಿನ ಪಟಾಕಿ ಹಚ್ಚುವುದರಿಂದ ಆರೋಗ್ಯ ಸಮಸ್ಯೆ ಕಡಿಮೆಯಾಗಲ್ಲ. ವರ್ಷವಿಡಿ ಪಬ್, ಬಾರ್ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಇದರಿಂದ ರಾಜ್ಯದಲ್ಲಿ ಸಾವಿರಾರು ಹೆಣ್ಣು ಮಕ್ಕಳು ಬೀದಿಗೆ ಬಿದ್ದಿದ್ದಾರೆ. ಯುವಕರು ದುಶ್ಚಟಕ್ಕೆ ದಾಸರಾಗಿ ಕುಟುಂಬವನ್ನೇ ಬೀದಿಗೆ ತರುತ್ತಿದ್ದಾರೆ. ಇಡೀ ಸಮಾಜವೇ ಹಾಳಾಗುತ್ತಿದೆ ಎಂದು ಕಿಡಿಕಾರಿದರು.

ಆರೋಗ್ಯದ ಬಗ್ಗೆ ಯೋಚನೆ ಮಾಡುವ ಸರ್ಕಾರ ಮದ್ಯಪಾನ ಮಾಡಲು, ಪಬ್, ಬಾರ್ ತೆರೆಯಲು ಯಾಕೆ ಅವಕಾಶ ನೀಡಿದೆ. ಪಟಾಕಿಯಿಂದ ಆರೋಗ್ಯ ಹಾಳಾಗುತ್ತದೆ ಎನ್ನುವುದಾದರೆ ಇವುಗಳ ಬಗ್ಗೆಯೂ ಸರ್ಕಾರ ಯೋಚಿಸಬೇಕಲ್ಲವೇ ಎಂದು ವಾಗ್ದಾಳಿ ನಡೆಸಿದರು.

ಕದ್ದುಮುಚ್ಚಿ ಪಟಾಕಿ ಹೊಡೆಯುವವರ ಬಗ್ಗೆ ಸಚಿವ ಸುಧಾಕರ್ ಹೇಳಿದಿಷ್ಟು..!

ಪಟಾಕಿ ಬ್ಯಾನ್ ಮಾಡುವ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು. ವರ್ಷಕ್ಕೊಮ್ಮೆ ಆಚರಿಸುವ ಹಬ್ಬಗಳಲ್ಲಿಯೂ ಪಟಾಕಿ ನಿಷೇಧ ಸರಿಯಲ್ಲ ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ