ದೇಗುಲಗಳಲ್ಲಿ ಇಂದಿನಿಂದ ಪ್ರಸಾದ, ಸೇವೆಗಳು ಆರಂಭ

Kannadaprabha News   | Asianet News
Published : Jul 25, 2021, 08:48 AM ISTUpdated : Jul 25, 2021, 09:17 AM IST
ದೇಗುಲಗಳಲ್ಲಿ ಇಂದಿನಿಂದ ಪ್ರಸಾದ, ಸೇವೆಗಳು ಆರಂಭ

ಸಾರಾಂಶ

ಅನ್‌ಲಾಕ್‌ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಸೇವೆ ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ

 ಬೆಂಗಳೂರು (ಜು.25):  ಅನ್‌ಲಾಕ್‌ ಬಳಿಕ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದ ದೇವಸ್ಥಾನಗಳಲ್ಲಿ ಇನ್ನು ಮುಂದೆ ಪ್ರಸಾದ ಮತ್ತು ವಿವಿಧ ಸೇವಾ ಕಾರ್ಯಗಳಿಗೂ ಅವಕಾಶ ನೀಡಲಾಗಿದೆ. ಭಾನುವಾರದಿಂದಲೇ ಭಕ್ತರು ಪುಣ್ಯ ಕ್ಷೇತ್ರಗಳಲ್ಲಿ ತಮ್ಮಿಷ್ಟದ ಸೇವೆಗಳನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಬಹುದು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್‌ ಮಾಡಿದ್ದು ಜು.25ರಿಂದ ವಿವಿಧ ಸೇವೆಗಳು ಮತ್ತು ಪ್ರಸಾದ ವಿತರಣೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆಯಿಂದ ಆದೇಶವೂ ಬಿಡುಗಡೆಯಾಗಿದೆ.

ಆಯ್ದ 100 ದೇಗುಲಗಳಲ್ಲಿ ಸಪ್ತಪದಿ ಯೋಜನೆ ಶೀಘ್ರ ಪುನಾರಂಭ

ಅನ್‌ಲಾಕ್‌ ಬಳಿಕ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತಾದರೂ, ಕೊರೋನಾ ಸೋಂಕಿನ ಮುನ್ನೆಚ್ಚರಿಕೆಯಿಂದಾಗಿ ವಿವಿಧ ಸೇವೆಗಳು ಮತ್ತು ಪ್ರಸಾದ ವಿತರಣೆಗೆ ಅನುಮತಿ ನೀಡಿರಲಿಲ್ಲ. ಇದರಿಂದಾಗಿ ಭಕ್ತರು ಪುಣ್ಯ ಕ್ಷೇತ್ರಗಳಿಗೆ ತೆರಳಿದ್ದರೂ ದೇವರ ದರ್ಶನಕ್ಕಷ್ಟೇ ತೃಪ್ತಿಪಟ್ಟುಕೊಳ್ಳಬೇಕಾಗಿತ್ತು.

ಧರ್ಮಸ್ಥಳ, ಕೊಲ್ಲೂರು, ಹೊರನಾಡು, ಶೃಂಗೇರಿ, ಯಡಿಯೂರು ಮತ್ತಿತರ ಶ್ರೀ ಕ್ಷೇತ್ರಗಳಲ್ಲಿ ನಡೆಯುತ್ತಿದ್ದ ಅನ್ನ ದಾಸೋಹಕ್ಕೆ ಇನ್ನು ಚಾಲನೆ ಸಿಗಲಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಸರ್ಪದೋಷ ಪೂಜೆಗಳೂ ಪ್ರಾರಂಭವಾಗಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!