ನೀವು ಅರಚ್ತಾ ಇರಿ, ಮುಂದೆಯೂ ನಾನೇ ಎಂಪಿ: ‘ಸಿಂಹ’ ಘರ್ಜನೆ!

Published : Jan 05, 2019, 04:41 PM ISTUpdated : Jan 05, 2019, 06:07 PM IST
ನೀವು ಅರಚ್ತಾ ಇರಿ, ಮುಂದೆಯೂ ನಾನೇ ಎಂಪಿ: ‘ಸಿಂಹ’ ಘರ್ಜನೆ!

ಸಾರಾಂಶ

‘2019ರಲ್ಲೂ ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನೇ ಸಂಸದ’|ಮುಂದಿನ ಬಾರಿ ಪ್ರಮೋದಾದೇವಿ ಒಡೆಯರ್ ಗೆ ಬಿಜೆಪಿ ಟಿಕೆಟ್?| ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಂಸದ ಪ್ರತಾಪ್ ಸಿಂಹ| ‘ನೀವು ಕಲ್ಲು ಹೊಡೆದರೆ ಅದರಲ್ಲೇ ನಾನು ಫೌಂಡೇಶನ್ ಕಟ್ತಿನಿ’|ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ ಎಂದ ಯಡಿಯೂರಪ್ಪ| 

ಮೈಸೂರು(ಜ.05): ಮುಂದಿನ ಬಾರಿಯೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ತಾವೇ ಸಂಸದ ಎಂದು ಬಿಜೆಪಿಯ ಪ್ರತಾಪ ಸಿಂಹ ಹೇಳಿದ್ದಾರೆ.

2019ರಲ್ಲಿ ಮುಂದಿನ ಬಾರಿ ಬಿಜೆಪಿ ಪ್ರಮೋದಾದೇವಿ ಒಡೆಯರ್ ಅವರಿಗೆ ಟಿಕೆಟ್ ನೀಡಲಿದೆ ಎಂಬ ಮಾಧ್ಯಮಗಳ ವರದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿಂಹ, ಮುಂದಿನ ಮೈಸೂರು-ಕೊಡಗು ಸಂಸದ ನಾನೇ ಎಂದು ಗುಡುಗಿದರು.

ಕೆಲವು ಮಾಧ್ಯಮಗಳ ತಲೆಯಲ್ಲಿ ಕಸ ತುಂಬಿದೆ. ಅದನ್ನೇ ತಮ್ಮ ಪತ್ರಿಕೆಗಳಲ್ಲಿ ಬರೆಯುತ್ತಾರೆ ಮತ್ತು ದೃಶ್ಯ ಮಾಧ್ಯಮಗಳು ಸ್ಪೆಶಲ್ ಸ್ಟೋರಿ ಹೆಸರಲ್ಲಿ ಬಿತ್ತರಿಸುತ್ತವೆ ಎಂದು ಸಿಂಹ ಈ ವೇಳೆ ಹರಿಹಾಯ್ದರು.

"
ನನಗೆ ಕಲ್ಲು ಹೊಡೆದರೆ ಅದರಲ್ಲೇ ನಾನು ಫೌಂಡೇಶನ್ ಕಟ್ತಿನಿ ಎಂದು ಮಾರ್ಮಿಕವಾಗಿ ನುಡಿದ ಸಿಂಹ, ಮುಂಧಿನ ಲೋಕಸಭಾ ಚುನಾವಣೆಯಲ್ಲೂ ಮತ್ತೆ ನಾನೇ ಗೆಲ್ಲುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು. 

ನಾವು ಹಾಲಿ 15 ಜನ ಬಿಜೆಪಿ ಸಂಸದರಿದ್ದು, ಈ 15 ಕ್ಷೇತ್ರದ ಜೊತೆಗೆ ಮತ್ತಷ್ಟು ಸ್ಥಾನ ಗೆಲ್ಲುತ್ತೇವೆ ಎಂದು ಸಿಂಹ ಭರವಸೆ ನೀಡಿದರು. ಈಗಾಗಲೇ ಎಲ್ಲಾ ಹಾಲಿ ಎಂಪಿಗಳಿಗೆ ಟಿಕೆಟ್ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಸಿಂಹ ಸ್ಪಷ್ಟಪಡಿಸಿದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ