
ಮೈಸೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಸಂಸದ ಪ್ರತಾಪ್ ಸಿಂಹ ಅಭಿನಂದಿಸಿದ್ದಾರೆ.
ಮೈಸೂರಿನಲ್ಲಿ ಭಾನುವಾರ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಹಾಡಿ ಹೊಗಳಿದ್ದರು ಎಂದು ಕಿಡಿಕಾರಿದರು.
ಟಿಪ್ಪು ಜಯಂತಿ ವಿರೋಧ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳದ ಬಗ್ಗೆ ಎದ್ದಿರುವ ಊಹಾಪೋಹ ಪ್ರಸ್ತಾಪಿಸಿದ ಅವರು, ದಸರಾ ಬೆನ್ನಲ್ಲೇ ದೀಪಾವಳಿ ಬಂತು, ನವರಾತ್ರಿ ಉಪವಾಸವಾದ್ದರಿಂದ ನನ್ನ ಮಗಳು ಅಜ್ಜಿ ಮನೆಗೆ ಹೋಗಬೇಕೆಂದು ಒತ್ತಾಯಿಸಿದಳು.
ಅಪ್ಪನಾಗಿ ನನ್ನ ಕರ್ತವ್ಯ ಪಾಲಿಸಲು ಕರೆದುಕೊಂಡು ಹೋದೆ. ಅಲ್ಲಿ ಮೊಬೈಲ್ ನೆಟ್ವರ್ಕ್ ಕೂಡಾ ಇರಲಿಲ್ಲ. ದೀಪಾವಳಿ ಮರುದಿನ ಪ್ರತಿಭಟನೆ ಇದ್ದರಿಂದ ಅಲ್ಲಿಗೂ ಪಾಲ್ಗೊಳ್ಳಲಾಗಲಿಲ್ಲ. ಬೇರೆ ಯಾವುದೇ ಕಾರಣ ಇಲ್ಲ ಎಂದು ಸ್ಪಷ್ಪಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ