
ಬೆಂಗಳೂರು(ಜೂ.03): ರಾಜ್ಯದಲ್ಲಿ ಈ ಬಾರಿ ದಾಖಲೆಯ ಮುಂಗಾರು ಪೂರ್ವ ಮಳೆ ಸುರಿದಿದ್ದು, ವಾಡಿಕೆಗಿಂತ ಶೇ.105ಹೆಚ್ಚು ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಮಾಚ್ರ್ 1ರಿಂದ ಮೇ 31ರವರೆಗೆ (ಪೂರ್ವ ಮುಂಗಾರು ಮಳೆ) 11.51 ಸೆಂ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 23.65 ಸೆಂ.ಮೀ. ಮಳೆಯಾಗಿದೆ.
ದಕ್ಷಿಣ ಒಳನಾಡಿನಲ್ಲಿ 28.21 ಸೆಂ.ಮೀ (ವಾಡಿಕೆ ಮಳೆ 13.75 ಸೆಂ.ಮೀ), ಉತ್ತರ ಒಳನಾಡಿನಲ್ಲಿ 15.18 (7.88), ಮಲೆನಾಡು 16.3 (35.42), ಕರಾವಳಿ 33.98 (15.58) ಸೆಂ.ಮೀ ಮಳೆಯಾಗಿದೆ. ಮೇ ತಿಂಗಳೊಂದರಲ್ಲೇ 16.83 ಸೆಂ.ಮೀ ಮಳೆ ಸುರಿದಿದೆ. ರಾಜ್ಯದಲ್ಲಿ 2020 ಮತ್ತು 2021ರ ಸಾಲಿನಲ್ಲಿಯೂ ವಾಡಿಕೆ ಮೀರಿ ಮಳೆಯಾಗಿತ್ತು. ಆದರೆ ಈ ಬಾರಿ ವಾಡಿಕೆಗಿಂತ ಶೇ.105 ಹೆಚ್ಚು ಮಳೆಯಾಗಿದೆ. 1971ರ ಬಳಿಕ ಬಿರು ಬೇಸಿಗೆಯ ತಿಂಗಳಲ್ಲಿ ಇಷ್ಟೊಂದು ಮಳೆ ಸುರಿದಿಲ್ಲ. ಬೀದರ್ ಬಿಟ್ಟು ಉಳಿದೆಲ್ಲ ಜಿಲ್ಲೆಗಳಲ್ಲಿ ವಾಡಿಕೆ ಮೀರಿ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Monsoon Rain ಈ ವರ್ಷ 103% ಮಳೆ ಸಾಧ್ಯತೆ, ವಾಡಿಕೆಗಿಂತ ಹೆಚ್ಚು ಎಂದ IMD!
ಚುರುಕಾಗದ ಮುಂಗಾರು:
ಮೇ 31ಕ್ಕೆ ಮುಂಗಾರು ಮಾರುತ ರಾಜ್ಯಕ್ಕೆ ಕಾಲಿಟ್ಟಿದ್ದು ಇನ್ನಷ್ಟೆ ಚುರುಕಾಗಬೇಕಿದೆ. ಶೇ.14 ಮಳೆ ಕೊರತೆ ಆಗಿದೆ. ಮಲೆನಾಡಿನಲ್ಲಿ ಶೇ.58, ಕರಾವಳಿಯಲ್ಲಿ ಶೇ.48, ದಕ್ಷಿಣ ಒಳನಾಡಿನಲ್ಲಿ ಶೇ.24 ಮಳೆ ಕೊರತೆ ಆಗಿದೆ. ಆದರೆ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.44 ಹೆಚ್ಚು ಮಳೆಯಾಗಿದೆ.
ಜೂನ್ ನಾಲ್ಕರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಬೆಂಗಳೂರು ನಗರೆ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಯೆಲ್ಲೋ ಅಲರ್ಚ್’ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ