2 ದಿನದಲ್ಲಿ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ

Published : Mar 15, 2023, 08:51 AM ISTUpdated : Mar 15, 2023, 08:56 AM IST
2 ದಿನದಲ್ಲಿ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ

ಸಾರಾಂಶ

ರಾಜ್ಯದಲ್ಲಿ ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣಕ್ಕೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು(ಮಾ.15):  ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಉತ್ತರ, ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣಕ್ಕೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಮಿಂಚು, ಗುಡುಗು ಸಹಿತ ಮುಂದಿನ 48 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸೋಮವಾರ ಕಲಬುರಗಿಯಲ್ಲಿ ರಾಜ್ಯ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 36.9 ಡಿಗ್ರಿ ಸೆಲ್ಸಿಯಸ್‌ ದಾಖಲಾದರೆ, ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಿಸಿಲಿನ ಬೇಗೆಯಿಂದ ಬಳಲುತ್ತಿರುವವರಿಗೆ ಗುಡ್‌ ನ್ಯೂಸ್‌: ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ..!

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್‌ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟುಕನಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರ ಬಸ್ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌