ಲೋಕಸಭಾ ಚುನಾವಣಾ ಫಲಿತಾಂಶ: 3 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಸಿದ್ಧತೆ

Published : Jun 03, 2024, 09:31 AM IST
ಲೋಕಸಭಾ ಚುನಾವಣಾ ಫಲಿತಾಂಶ: 3 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಸಿದ್ಧತೆ

ಸಾರಾಂಶ

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್‌ 4 ರಂದು ನಡೆಯುವುದರಿಂದ ಬೆಂಗಳೂರಿನ ಮೂರು ಮತ ಎಣಿಕಾ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು (ಜೂ.3) : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್‌ 4 ರಂದು ನಡೆಯುವುದರಿಂದ ಬೆಂಗಳೂರಿನ ಮೂರು ಮತ ಎಣಿಕಾ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದ ತುಷಾರ್‌ ಗಿರಿನಾಥ್‌, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯ ನಡೆಯುವ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿಟಿವಿ ಹಾಗೂ ವಿಡಿಯೋ ವ್ಯವ್ಯಸ್ಥೆ ಮಾಡಬೇಕು. ಮತ ಎಣಿಕೆ ಕೇಂದ್ರಗಳಲ್ಲಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶಿಸಿದ್ದಾರೆ.

ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ

ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿಯನ್ನು ನೀಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಂಚೆ ಮತ ಪತ್ರ ಎಣಿಕೆಯನ್ನು ಸರಿಯಾಗಿ ಮಾಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ವಿನೋತ್ ಪ್ರಿಯಾ, ಸ್ನೇಹಲ್, ದಯಾನಂದ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ್ ಉಪಸ್ಥಿತರಿದ್ದರು.

MLC Election 2024: ಇಂದು ಮೇಲ್ಮನೆ 6 ಸ್ಥಾನಕ್ಕೆ ಮತದಾನ

ಮತ ಎಣಿಕೆ ನಡೆಯುವ ಸ್ಥಳಗಳು

  • ಲೋಕಸಭಾ ಕ್ಷೇತ್ರ ಮತ ಎಣಿಕಾ ಕೇಂದ್ರ
  • ಬೆಂಗಳೂರು ಕೇಂದ್ರ ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ
  • ಬೆಂಗಳೂರು ಉತ್ತರ ಸೇಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ
  • ಬೆಂಗಳೂರು ದಕ್ಷಿಣ ಎಸ್.ಎಸ್.ಎಂ.ಆರ್.ವಿ ಕಾಲೇಜು, 9ನೇ ಬ್ಲಾಕ್, ಜಯನಗರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ