ನಾಳೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!

Published : Nov 09, 2023, 07:33 PM IST
ನಾಳೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!

ಸಾರಾಂಶ

ನಾಳೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ತಾಲೂಕಿನಾದ್ಯಂತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಂಡ್ಯ (ನ.9): ನಾಳೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ತಾಲೂಕಿನಾದ್ಯಂತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಾಳೆ (ನ.10) ರಂದು ಟಿಪ್ಪುವಕ್ಫ್ ಎಸ್ಟೇಟ್ ವತಿಯಿಂದ  ಜಯಂತಿ ಆಚರಿಸಲು ಸಿದ್ಧತೆ ನಡೆದಿದೆ. ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆಯಿರು ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿರುವ ತಹಸೀಲ್ದಾರ ಪರಶುರಾಮ ಸತ್ತಿಗೇರಿ. 

ಕೊಡಗಿನಲ್ಲಿ ಚುನಾವಣೆಗೆ ಟಿಪ್ಪು ಅಸ್ತ್ರ ಬಳಸಿದ್ವಾ ರಾಜಕೀಯ ಪಕ್ಷಗಳು!

ನಾಳೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆವಿರುತ್ತದೆ. ಈ ವೇಳೆ ಮೆರವಣಿಗೆ, ಪ್ರತಿಭಟನೆ, ರಾಲಿಗಳಿಗೆ ನಿರ್ಬಂಧ. ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧವಿದೆ. ಘೋಷಣೆ ಕೂಗದಂತೆ, ಪ್ರಜೋಧನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸುವುದು ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿ, ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ 144 ಸಕ್ಷನ್ ಜಾರಿ ಮಾಡಲಾಗಿದೆ.

ಅಧಿಕೃತವಾಗಿ ಸರ್ಕಾರದ ಕಡೆಯಿಂದ ನಡೆಯಲ್ಲ ಟಿಪ್ಪು ಜಯಂತಿ ಆಚರಣೆ ಇಲ್ಲ. ಟಿಪ್ಪು ಜಯಂತಿ ರದ್ದುಪಡಿಸಿ 2019 ರಲ್ಲಿಯೇ ಆದೇಶ ಮಾಡಿರುವ ಸರ್ಕಾರ. ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಇದುವರೆಗೆ ಸರ್ಕಾರ ಟಿಪ್ಪು ಜಯಂತಿ ರದ್ದತಿ ವಾಪಸ್  ಹೀಗಾಗಿ ಈ ವರ್ಷವೂ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರ ನಡೆದಂತೆ ಈ ವೇಳೆ ನಡೆಯಬಹುದೆಂಬ ಮುಂಜಾಗ್ರತೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಬಂದೋಬಸ್ತ್ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ