ಕೊಡಗಿನ ವೀರನಿಗೆ ಕೊಡವ ಭಾಷೆಯಲ್ಲೇ ಶುಭ ಕೋರಿದ ರಾಷ್ಟ್ರಪತಿ!

By Web DeskFirst Published Jan 28, 2019, 12:59 PM IST
Highlights

ದೇಶದ ಹೆಮ್ಮೆಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸ್ಮರಿಸಿಕೊಂಡಿದ್ದಾರೆ.
 

ಮಡಿಕೇರಿ[ಜ.28]: ಇಂದು ಭಾರತ ದೇಶದ ರಕ್ಷಣಾ ಪಡೆಯ ಇತಿಹಾಸದಲ್ಲಿ ದಂತ ಕಥೆಯಾಗಿರುವ ಹಾಗೂ ಸೇನಾ ಇತಿಹಾಸದ ಏಕೈಕ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪಅವರ 120ನೇ ಜನ್ಮ ದಿನಾಚರಣೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸರಣಿ ಟ್ವೀಟ್ ಮಾಡಿ ಕಾರ್ಯಪ್ಪನವರ ಗುಣಗಾನ ಮಾಡಿದ್ದಾರೆ, ಈ ಟ್ವೀಟ್ ಗಳನಗ್ನು ಕೊಡವ ಭಾಷೆಗಳಲ್ಲೇ ಮಾಡಿದ್ದಾರೆ ಎಂಬುವುದು ಉಲ್ಲೇಖನೀಯ.

ಟ್ವೀಟ್ ಮಾಡಿರುವ ರಾಷ್ಟ್ರಪತಿಗಳು 'ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪನವರ ಜನ್ಮದಿನದ ಸ್ಮರಣ, ಕರ್ನಾಟಕದ ಕೊಡಗಿನ ಹಿರಿಮೆಯ ಪುತ್ರ ಹಾಗೂ ಅದಕ್ಕೂ ಮಿಗಿಲಾಗಿ ಭಾರತದ ಮಹಾನ್ ಪುತ್ರರಾದ ಫೀಲ್ಡ್ ಮಾರ್ಷೆಲ್ ಕೆ.ಎಂ.ಕಾರಿಯಪ್ಪನವರು ನಮ್ಮ ಅತ್ಯುತ್ತಮ ಸೇನಾ ದಂಡನಾಯಕರಲ್ಲಿ ಒಬ್ಬರು ಹಾಗೂ ಅತ್ಯಂತ ನೆಚ್ಚಿನ ರಾಷ್ಟ್ರದ ನಾಯಕರಾಗಿ ಉಳಿದಿರುತ್ತಾರೆ' ಎಂದಿದ್ದಾರೆ.

ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಆಯಿಂಗಡ ಪುಟ್ಟ ನ ದಿನತ್ ರ ಒರ್ ಸ್ಮರಣೆ. ಕೊಡ ಗ್ ರ , ಕರ್ನಾಟಕ ತ್ ರ, ಆಂಡ ಮೀದ ಭಾರತ ದೇಶ ತ್ ರ ಕೊದಿಮೋಂವ ನಾನ ಇಯಂಗ ನಂಗಡ ಕೇಳಿ ಪೋನ ಮಹದಂಡ ನಾಯಕ ಅಲ್ಲತೆ ಪ್ರೀತಿರ ರಾಷ್ಟ್ರನಾಯಕ. ಇಯಂಗಡ ದೇಶ ಸೇವೆನ ನಂಗ ಎಕ್ಕಲೂ ಗೇ ನ ಬೆಚ್ಚೋ ವ. - ರಾಷ್ಟ್ರಪತಿ ಕೋವಿಂದ್

— President of India (@rashtrapatibhvn)

ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರಿಯಪ್ಪನವರ ಜನ್ಮದಿನದ ಸ್ಮರಣೆ. ಕರ್ನಾಟಕದ ಕೊಡಗಿನ ಹಿರಿಮೆಯ ಪುತ್ರ ಹಾಗೂ ಅದಕ್ಕೂ ಮಿಗಿಲಾಗಿ ಭಾರತದ ಮಹಾನ್ ಪುತ್ರರಾದ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರು ನಮ್ಮ ಅತ್ತ್ಯುತ್ತಮ ಸೇನಾ ದಂಡನಾಯಕರಲ್ಲಿ ಒಬ್ಬರು ಹಾಗೂ ಅತ್ಯಂತ ನೆಚ್ಚಿನ ರಾಷ್ಟ್ರ ನಾಯಕರಾಗಿ ಉಳಿದಿರುತ್ತಾರೆ - ರಾಷ್ಟ್ರಪತಿ ಕೋವಿಂದ್

— President of India (@rashtrapatibhvn)

कोडागु (कुर्ग), कर्नाटक और पूरे भारत के सपूत फील्ड मार्शल के एम करिअप्पा की जयंती पर हम उन्हें सर्वोत्तम सैन्य कमांडरों में से एक के रूप में याद करते हैं। वे देश के अति प्रिय नायक रहे हैं और हम सब के दिलों में उनकी राष्ट्र सेवा के लिए सदैव सम्मान का भाव रहेगा — राष्ट्रपति कोविन्द

— President of India (@rashtrapatibhvn)

Being handed the Field Marshal’s baton (bottom photo). Only a Field Marshal/five star general carries a baton and salutes with his baton. pic.twitter.com/CJFdXdEpiN

— President of India (@rashtrapatibhvn)

ಸೇನಾ ಇತಿಹಾಸದ ಏಕೈಕ ಮಹಾ ದಂಡನಾಯಕ, ಯೋಧರ ನಾಡಿನ  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪಅವರ ಜನ್ಮ ದಿನಾಚರಣೆಯನ್ನು ಅವರ ತವರುನಾಡಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ನಗರದ ಮುಖ್ಯ ದ್ವಾರದಲ್ಲಿರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಅಪ್ರತಿಮ ವೀರ ಸೇನಾನಿಯನ್ನ ಸ್ಮರಿಸಿದ್ರು. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕಾರ್ಯಪ್ಪ ಅವರು ಹುಟ್ಟಿದ ಮನೆ ಹಾಗೂ ಅವರ ಸಮಾಧಿ ಇರುವ ನಗರದ ರೋಶನಾರ ಬಳಿ ಪೂಜೆ ಸಲ್ಲಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ವೀರ ಸೇನಾನಿಯನ್ನು ಸ್ಮರಿಸಿದರು. 

ಇನ್ನು ಕಾರ್ಯಪ್ಪ ಹುಟ್ಟು ಹಬ್ಬದ ಹಿನ್ನಲೆ ನಗರದ ಪ್ರಮುಖ ಬೀದಿಗಳಲ್ಲಿ ಮಾಜಿ ಸೈನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು  ಮೆರವಣಿಗೆ ನಡೆಸಿದ್ರು. ಭಾರತದ ಮಹಾದಂಡನಾಯಕನ ಹುಟ್ಟು ಹಬ್ಬದ ಪ್ರಯುಕ್ತ  ವಿವಿಧ ಕಲಾ ತಂಡಗಳು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗುವ ಮೂಲಕ ಆಕರ್ಷಸಿದವು. ಕೊಡಗು ಜಿಲ್ಲಾಡಳಿತ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ನಿಂದ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು.

click me!