ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟ

Kannadaprabha News   | Kannada Prabha
Published : Mar 05, 2026, 03:30 AM IST
KP Award

ಸಾರಾಂಶ

ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮಾಧ್ಯಮ ಸಂಸ್ಥೆಗಳ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟವಾಗಿದ್ದು, ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಯುಗಾದಿ ಪುರಸ್ಕಾರವು ಪ್ರಶಂಸಾಪತ್ರ, 25,000 ರುಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ

ಬೆಂಗಳೂರು : ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮಾಧ್ಯಮ ಸಂಸ್ಥೆಗಳ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟವಾಗಿದ್ದು, ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಕಿರುತೆರೆ ಮತ್ತು ರಂಗಭೂಮಿ ಕ್ಷೇತ್ರದ ಸಾಧನೆಗಾಗಿ ಟಿ.ಎನ್. ಸೀತಾರಾಮ್ ಆಯ್ಕೆ

ಕಿರುತೆರೆ ಮತ್ತು ರಂಗಭೂಮಿ ಕ್ಷೇತ್ರದ ಸಾಧನೆಗಾಗಿ ಟಿ.ಎನ್. ಸೀತಾರಾಮ್, ಚಿತ್ರನಿರ್ದೇಶನ, ನಟನೆ, ಕಾರ್ಯಕ್ರಮ ನಿರೂಪಣೆ ಸೇರಿ ಬಹುಮುಖಿ ಸಾಧನೆಗಾಗಿ ರಮೇಶ್ ಅರವಿಂದ್, ಚಿತ್ರಕಲೆಯ ಸಾಧ್ಯತೆಯನ್ನು ವಿಸ್ತರಿಸಿ ಪುರಾಣ ಚಿತ್ರಗಳ ಮೂಲಕ ಗಮನ ಸೆಳೆದ ಮಹತ್ವದ ಚಿತ್ರಕಲಾವಿದ ಚಂದ್ರನಾಥ ಆಚಾರ್ಯ, ಜನಪದ ಕ್ಷೇತ್ರದಲ್ಲಿ ಹಾಡುಗಳನ್ನು ಸಂಗ್ರಹಿಸಿ ನಿರಂತರವಾಗಿ ಹಾಡುವ ಪ್ರತಿಭೆಗಾಗಿ ಮೈಸೂರು ಗುರುರಾಜ್, ಕನ್ನಡ ಸಾಹಿತ್ಯ ಕ್ಷೇತ್ರದ ಸಾಧನೆ ಮತ್ತು ಅನುವಾದದ ಮೂಲಕ ಕನ್ನಡದ ಅವಕಾಶ ವಿಸ್ತರಿಸುತ್ತಿರುವ ವಿವೇಕ ಶಾನಭಾಗ್ ಮತ್ತು ಹಿಂದುಸ್ತಾನಿ ಸಂಗೀತದಲ್ಲಿ ಅಭೂತಪೂರ್ವ ಸಾಧಕರಾಗಿರುವ ಪಂಡಿತ ವಿನಾಯಕ ತೊರವಿ ಈ ಬಾರಿಯ ಯುಗಾದಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

25,000 ರುಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆ

ಯುಗಾದಿ ಪುರಸ್ಕಾರವು ಪ್ರಶಂಸಾಪತ್ರ, 25,000 ರುಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ‘ಗುಬ್ಬಿಗೂಡು’ ಅರ್ಪಿಸುವ, ‘ಕರ್ನಾಟಕ ಚಿತ್ರಕಲಾ ಪರಿಷತ್‌’ ಆಶ್ರಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸದ್ಯದಲ್ಲೇ ನಡೆಯುವ ‘ಯುಗಾದಿ ಸಂಭ್ರಮ’ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

2025ರಲ್ಲಿ ಐವರಿಗೆ ಯುಗಾದಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಸಾಹಿತ್ಯ- ಬಿ.ಆರ್‌. ಲಕ್ಷ್ಮಣರಾವ್, ರಂಗಭೂಮಿ- ಅಕ್ಷತಾ ಪಾಂಡವಪುರ, ಸಂಗೀತ- ಪಂಡಿತ್‌ ವೆಂಕಟೇಶ್‌ಕುಮಾರ್‌, ಸಿನಿಮಾ- ಗಿರೀಶ್‌ ಕಾಸರವಳ್ಳಿ, ಕಲೆ ಕ್ಷೇತ್ರದಿಂದ ಪ.ಸ. ಕುಮಾರ್‌ ಪುರಸ್ಕಾರಕ್ಕೆ ಭಾಜನರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗೃಹಲಕ್ಷ್ಮಿಯರಿಗೆ ವರ್ಷಕ್ಕೆ 2 ಸೀರೆ ? - ‘ಇಂದಿರಾ ಕಿಟ್‌’ ಯೋಜನೆ : ಮತ್ತೇನು ಸಿಗಲಿದೆ?
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್: ಕೊನೆಗೂ ಕಂಡುಬಂತು 'ಕೊಡವ' ಸೊಗಡು!