ಪಂಚಾಯ್ತಿ ಅನುದಾನ ಹೆಚ್ಚಳಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

Published : Mar 25, 2023, 02:00 AM IST
ಪಂಚಾಯ್ತಿ ಅನುದಾನ ಹೆಚ್ಚಳಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

ಸಾರಾಂಶ

ಪಂಚಾಯ್ತಿಗಳ ಆರ್ಥಿಕ ವಿಕೇಂದ್ರೀಕರಣವೇ ಸರ್ಕಾರದ ಗುರಿ, 585 ಗ್ರಾ.ಪಂ.ಗೆ ನರೇಗಾ, ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು(ಮಾ.25): ರಾಜಕೀಯ ವಿಕೇಂದ್ರೀಕರಣದ ಜೊತೆಗೆ ಆರ್ಥಿಕ ವಿಕೇಂದ್ರೀಕರಣ ಆಗಬೇಕೆಂಬ ದೃಷ್ಟಿಯಿಂದ ಗ್ರಾಮ ಪಂಚಾಯತ್‌ಗಳ ಅನುದಾನ ಹೆಚ್ಚಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶುಕ್ರವಾರ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿದ್ದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ 585 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ-2023 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ ಸೇರಿದಂತೆ ಮೂರು ಹಂತದ ಪಂಚಾಯತ್‌ ವ್ಯವಸ್ಥೆ ಯಶಸ್ವಿಯಾಗಬೇಕಾದರೆ ಕೇವಲ ರಾಜಕೀಯ ಅಧಿಕಾರ ಕೊಟ್ಟರೆ ಸಾಲದು. ಆರ್ಥಿಕ ಅಧಿಕಾರವನ್ನು ಕೊಡಬೇಕೆಂಬುದು ಬಹಳ ವರ್ಷಗಳ ಬೇಡಿಕೆ. ಮಹಾತ್ಮಗಾಂಧಿ ನರೇಗಾದಲ್ಲಿ ರಾಜ್ಯ ಸರ್ಕಾರದ ಪಂಚಾಯತ್‌ ರಾಜ್‌ ಇಲಾಖೆ ಅತ್ಯುತ್ತಮ ಕೆಲಸ ಮಾಡಿದೆ. ನಾವು ಇಡೀ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಕೊಟ್ಟಿರುವಂತ ಗುರಿಯನ್ನು ಮುಟ್ಟಿಹೆಚ್ಚುವರಿ ಅನುದಾನ ಪಡೆದುಕೊಳ್ಳುವ ಕಾರ್ಯವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆ. ಹೀಗಾಗಿ ಪ್ರತಿಯೊಂದು ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಸಿಬ್ಬಂದಿಗಳು, ಅಧಿಕಾರಿಗಳಿಗೆ ವಿಶೇಷ ಅಭಿನಂದನೆ ತಿಳಿಸುತ್ತೇನೆ ಎಂದರು.

ಮಹಾ ವಿಧಾನ ಪರಿಷತ್ತಿನಲ್ಲಿ ಸಿಎಂ ಬೊಮ್ಮಾಯಿಗೆ ಅವಮಾನ

ನರೇಗಾದಿಂದ ಕೆಲಸ, ಆಸ್ತಿ:

ನರೇಗಾದಿಂದ ಸಾಕಷ್ಟು ಆಸ್ತಿಗಳು ನಿರ್ಮಾಣವಾಗಿವೆ. ಬಹಳಷ್ಟುಜನರಿಗೆ ಕೆಲಸವೂ ಸಿಕ್ಕಿದೆ. ಕಾನೂನಿನಲ್ಲಿ ಬದಲಾವಣೆ ತಂದು ಇನ್ನೂ ಹೆಚ್ಚಿನ ರೀತಿಯಲ್ಲಿ ಅರ್ಥಪೂರ್ಣವಾಗಿ ಕೆಲಸ ಮಾಡಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಶಾಲೆ, ಆಸ್ಪತ್ರೆ ಇತ್ಯಾದಿಗಳಿಗೆ ನರೇಗಾ ಬಳಕೆಯಾಗುವುದು ಬಹಳ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಚಿವರೊಂದಿಗೆ ಈಗಾಗಲೇ ಈ ವಿಷಯದ ಕುರಿತು ಮಾತನಾಡಿದ್ದು ಮುಂದಿನ ದಿನಗಳಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಬಜೆಟ್‌ನಲ್ಲಿ ಎ,ಬಿ,ಸಿ,ಡಿ ಹಂತದ ಗ್ರಾಮ ಪಂಚಾಯತ್‌ಗಳಿಗೆ ಅನುದಾನವನ್ನು ಎರಡುಪಟ್ಟು ಮಾಡಿದ್ದೇವೆ. ಈ ಹಿಂದೆ 10 ಲಕ್ಷ ಪಡೆಯುತ್ತಿದ್ದ ಪಂಚಾಯತ್‌ಗೆ 20 ಲಕ್ಷ ರು. ಸಿಗುತ್ತದೆ. 30 ಲಕ್ಷ ಪಡೆಯುತ್ತಿದ್ದ ಗ್ರಾಪಂಗೆ 60 ಲಕ್ಷ ಸಿಗಲಿದೆ. ಯಾಕೆಂದರೆ ಈ ಹಿಂದೆ ಬರುತ್ತಿದ್ದ ಅನುದಾನ ವಿದ್ಯುತ್‌ ಬಿಲ್‌ ಪಾವತಿ ಸೇರಿದಂತೆ ಮತ್ತಿತರ ವಿಷಯಕ್ಕೆ ಖರ್ಚಾಗುತ್ತಿತ್ತು. ಹೀಗಾಗಿ ನಿಮ್ಮ ವಿವೇಚನೆಯಲ್ಲಿ ಆಸ್ತಿ ನಿರ್ಮಾಣ ಮಾಡಲು ಅನುದಾನ ಹೆಚ್ಚಿಸಿದ್ದು ಇದಕ್ಕಾಗಿ ರಾಜ್ಯ ಸರ್ಕಾರ ಬೊಕ್ಕಸದಿಂದ 2 ಸಾವಿರ ಕೋಟಿ ರು. ಹೆಚ್ಚುವರಿಯಾಗಿ ಗ್ರಾಮ ಪಂಚಾಯತ್‌ಗಳಿಗೆ ಕೊಟ್ಟಿದ್ದೇನೆ ಎಂದರು.

585 ಪಂಚಾಯ್ತಿಗೆ ನರೇಗಾ ಪ್ರಶಸ್ತಿ:

ಇದೇ ವೇಳೆ 2019-20, 2020-21 ಮತ್ತು 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಮಹಾತ್ಮ ಗಾಂಧಿ ನರೇಗಾ ಪ್ರಶಸ್ತಿಯನ್ನು ಒಟ್ಟು 585 ಪಂಚಾಯತ್‌ಗಳಿಗೆ ವಿತರಿಸಲಾಯಿತು.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರ್‌, ಕಂದಾಯ ಸಚಿವ ಆರ್‌.ಅಶೋಕ್‌, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ್‌ ಹೆಗಡೆ, ವಿಧಾನ ಪರಿಷತ್ತು ಸದಸ್ಯ ಅರುಣ್‌, ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್‌.ಕೆ.ಅತೀಕ್‌, ಉಮಾ ಮಹದೇವನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಸ್ತಿ ತೆರಿಗೆ ಗೂಗಲ್‌, ಫೋನ್‌ ಪೇನಲ್ಲೇ ಕಟ್ಟಿ:

ಕಾರ್ಯಕ್ರಮದಲ್ಲಿ ಆಸ್ತಿ ತೆರಿಗೆಯನ್ನು ಫೋನ್‌ಪೇ, ಗೂಗಲ್‌ ಪೇ ಮೂಲಕ ಕಟ್ಟಲು ಮತ್ತು ತೆರಿಗೆ ಸಂಗ್ರಹದ ಪಿಒಎಸ್‌ ಪಿಒಎಸ್‌ ಉಪಕರಣಗಳ ಲೋಕಾರ್ಪಣೆ ಹಾಗೂ ಜಲಶಕ್ತಿ ಅಭಿಯಾನಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ