
ಮಂಡ್ಯ(ನ.24): ಇಲ್ಲಿನ ಕನಗನಮರಡಿ ವಿ.ಸಿ.ನಾಲೆಗೆ ಖಾಸಗಿ ಬಸ್ ವೊಂದು ಉರುಳಿದ ಪರಿಣಾಮ ಕನಿಷ್ಟ 20 ಜನ ಸಾವನ್ನಪ್ಪಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಲ್ಲಿನ ಕನಗನಮರಡಿ ವಿ.ಸಿ.ನಾಲೆಗೆ ಉರುಳಿದೆ. ಪರಿಣಾಮ 20 ಜನರು ಸಾವನ್ನಪ್ಪಿದ್ದು, ಇತರರಿಗೆ ಗಂಭೀರ ಗಾಯಗಳಾಗಿವೆ. ಬಸ್ ನಲ್ಲಿ ಕನಿಷ್ಟ 40 ಪ್ರಯಾಣಿಕರು ಇದ್ದರು ಎಂದು ಮೂಲಗಳು ತಿಳಿಸಿವೆ.
ಅಪಘಾತ ಸಂಭವಿಸುತ್ತಿದ್ದಂತೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತೀವ್ರ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ