ಹಬ್ಬದ ವೇಳೆ ಬೇಕಾಬಿಟ್ಟಿ ಪ್ರಯಾಣ ದರ ಹೆಚ್ಚಳ: ಖಾಸಗಿ ಬಸ್‌ ಪರ್ಮಿಟ್ ರದ್ದು..!

Published : Sep 05, 2024, 09:05 AM IST
ಹಬ್ಬದ ವೇಳೆ ಬೇಕಾಬಿಟ್ಟಿ ಪ್ರಯಾಣ ದರ ಹೆಚ್ಚಳ: ಖಾಸಗಿ ಬಸ್‌ ಪರ್ಮಿಟ್ ರದ್ದು..!

ಸಾರಾಂಶ

ಹಬ್ಬದ ಹಬ್ಬದ ಹಿನ್ನೆಲೆಯಲ್ಲಿ ದುಬಾರಿ ಪ್ರಯಾಣ ದರ ವಸೂಲಿ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ 10 ತಂಡಗಳನ್ನು ರಚಿಸಿ ವಿವಿಧ ಕಡೆಗಳಲ್ಲಿ ತಪಾಸಣಾ ಕಾರ್ಯ ನಡೆಸಲಾಗಿದ್ದು, ದುಬಾರಿ ಪ್ರಯಾಣ ದರ ಪಡೆದ ಬಸ್ ಗಳಿಗೆ ದಂಡ ವಿಧಿಸಿ, ಪರ್ಮಿಟ್ ರದ್ದು ಮಾಡಲಾಗುತ್ತಿದೆ: ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ  

ಬೆಂಗಳೂರು(ಸೆ.05):  ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣ ದರ ಹೆಚ್ಚಳ ಮಾಡಿರುವ ಖಾಸಗಿ ಬಸ್‌ಗಳ ವಿರುದ್ಧ ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ 20ಕ್ಕೂ ಹೆಚ್ಚಿನ ಬಸ್‌ಗಳಿಗೆ ದಂಡ ವಿಧಿಸಿದೆ. 

ನಗರದ ಕೇಂದ್ರ ಭಾಗ ಹಾಗೂ ಹೊರವಲಯಗಳಲ್ಲಿ ಬುಧವಾರ ಖಾಸಗಿ ಬಸ್‌ಗಳ ತಪಾಸಣೆ ನಡೆಸಿದ್ದು, ಬೇಕಾಬಿಟ್ಟಿಯಾಗಿ ದರ ಹೆಚ್ಚಳ ಮಾಡಿರುವ ಖಾಸಗಿ ಬಸ್‌ಗಳಿಗೆ ದುಬಾರಿ ದಂಡ ವಿಧಿಸಿದ್ದು, ಪರ್ಮಿಟ್ ರದ್ದುಗೊಳಿಸಲು ನಿರ್ಧರಿಸಲಾಗಿದೆ. 

ದಕ್ಷಿಣ ಭಾರತದ ಖಾಸಗಿ ಬಸ್‌ಗಳಿಗೆ ಪೈಪೋಟಿ ನೀಡಲು ಬಂದ ಜರ್ಮನಿಯ ಫ್ಲಿಕ್ಸ್ ಬಸ್!

10 ತಂಡಗಳಿಂದ ಕಾರ್ಯಾಚರಣೆ: 

ದುಬಾರಿ ಪ್ರಯಾಣ ದರ ವಸೂಲಿ ಮಾಡಿದ ಖಾಸಗಿ ಬಸ್‌ಗಳ ಪತ್ತೆಗಾಗಿ ಸಾರಿಗೆ ಇಲಾಖೆ ಬುಧವಾರ 10 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದೆ.ಆನಂದರಾವ್ ವೃತ್ತ, ಮೆಜಿಸ್ಟಿಕ್, ಹೆಬ್ಬಾಳ, ಗೊರಗುಂಟೆಪಾಳ್ಯ, ಕಲಾಸಿಪಾಳ್ಯ, ಹೊಸಕೋಟೆ ಟೋಲ್‌ ಬಳಿ, ಮೈಸೂರು ರಸ್ತೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಪರಿಶೀಲನಾ ತಂಡವು ಬಸ್‌ಗಳಲ್ಲಿ ಪರಿಶೀಲನೆ ನಡೆಸಿವೆ. ಈ ವೇಳೆ ಪ್ರಯಾಣಿಕರಿಂದ ಪ್ರಯಾಣ ದರದ ಮಾಹಿತಿ ಪಡೆದುಕೊಂಡಿದ್ದು, ಮಾಮೂಲಿಗಿಂತ ಎರಡೂರು ಪಟ್ಟು ಹೆಚ್ಚಿನ ಪ್ರಯಾಣ ದರ ಪಡೆದ ಬಸ್‌ಗಳ ವಿರುದ್ಧ ಕ್ರಮ ಕೈಗೊಂಡು, 20ಕ್ಕೂ ಹೆಚ್ಚಿನ ಬಸ್‌ಗಳಿಗೆ ದಂಡ ವಿಧಿಸಿವೆ. 

ಕೇರಳ ಬಸ್ ಕಂಡಕ್ಟರ್ ಕ್ವಿಕ್ ರಿಯಾಕ್ಷನ್‌: ಬದುಕುಳಿದ ಪ್ರಯಾಣಿಕ: ವೀಡಿಯೋ ಸಖತ್‌ ವೈರಲ್

ಇನ್ನೂ ಎರಡು ದಿನ ಕಾರ್ಯಾಚರಣೆ: 

ಖಾಸಗಿ ಬಸ್ ಗಳ ವಿರುದ್ಧ ಕಾರ್ಯಾಚರಣೆಯನ್ನು ಮಂಗಳವಾರ ರಾತ್ರಿಯಿಂದಲೇ ಆರಂಭಿಸಲಾಗಿದ್ದು, ಬುಧವಾರವೂ ಇದನ್ನು ಮುಂದುವರಿಸಲಾಗಿತ್ತು. ಗುರುವಾರ ಮತ್ತು ಶುಕ್ರವಾರ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಿರಲಿದ್ದು, ಖಾಸಗಿ ಬಸ್‌ಗಳ ಸಂಖ್ಯೆಯಲ್ಲೂ ಏರಿಕೆಯಾಗಲಿದೆ. ಈ ಎರಡು ದಿನಗಳು ಬಸ್‌ಗಳ ಪರಿಶೀಲನಾ ಕಾರ್ಯವನ್ನು ಮತ್ತಷ್ಟು ಹೆಚ್ಚಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಹಬ್ಬದ ಹಬ್ಬದ ಹಿನ್ನೆಲೆಯಲ್ಲಿ ದುಬಾರಿ ಪ್ರಯಾಣ ದರ ವಸೂಲಿ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ 10 ತಂಡಗಳನ್ನು ರಚಿಸಿ ವಿವಿಧ ಕಡೆಗಳಲ್ಲಿ ತಪಾಸಣಾ ಕಾರ್ಯ ನಡೆಸಲಾಗಿದ್ದು, ದುಬಾರಿ ಪ್ರಯಾಣ ದರ ಪಡೆದ ಬಸ್ ಗಳಿಗೆ ದಂಡ ವಿಧಿಸಿ, ಪರ್ಮಿಟ್ ರದ್ದು ಮಾಡಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ