ಬಿಬಿಎಂಪಿ ದರಕ್ಕೆ ಚಿಕಿತ್ಸೆ ಬೇಕಾ? ಬೇರೆ ಆಸ್ಪತ್ರೆಗೆ ಹೋಗಿ: ವೃದ್ಧ ಕುಟುಂಬಸ್ಥರು ಅಳಲು

Kannadaprabha News   | Asianet News
Published : Aug 01, 2020, 09:41 AM IST
ಬಿಬಿಎಂಪಿ ದರಕ್ಕೆ ಚಿಕಿತ್ಸೆ ಬೇಕಾ? ಬೇರೆ ಆಸ್ಪತ್ರೆಗೆ ಹೋಗಿ: ವೃದ್ಧ ಕುಟುಂಬಸ್ಥರು ಅಳಲು

ಸಾರಾಂಶ

ಜು.24ರಂದು ಚಿಕಿತ್ಸೆಗಾಗಿ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ| ಆಸ್ಪತ್ರೆಯಲ್ಲಿ ರೋಗಿಯನ್ನು ಡಿಸ್ಜಾರ್ಜ್‌ ಮಾಡಲು 3.50 ಲಕ್ಷ ಪಾವತಿಸಲು ಸೂಚಿಸಿದ ಸ್ಪರ್ಶ ಆಸ್ಪತ್ರೆ| ವೃದ್ಧರ ಮಕ್ಕಳು ಈಗಾಗಲೇ 2 ಲಕ್ಷ ಬಿಲ್‌ ಪಾವತಿಸಿದ್ದಾರೆ. ಆದರೆ, ಉಳಿದ ಮೊತ್ತ ಪಾವತಿಸಲು ಆಸ್ಪತ್ರೆ ಸಿಬ್ಬಂದಿಯಿಂದ ಒತ್ತಡ| ಕ್ವಾರಂಟೈನ್‌ನಲ್ಲಿದ್ದೇವೆ, ಹಣ ಹೊಂದಿಸಲು ಪರದಾಡುತ್ತಿದ್ದೇವೆ ಎಂದು ವೃದ್ಧರ ಕುಟುಂಬಸ್ಥರು ಮನವಿ ಮಾಡಿದರೂ ಆಸ್ಪತ್ರೆ ಸಿಬ್ಬಂದಿ ಒಪ್ಪುತ್ತಿಲ್ಲ ಎನ್ನಲಾಗಿದೆ|

ಬೆಂಗಳೂರು(ಆ.01): ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 60 ವರ್ಷದ ರೋಗಿಯೊಬ್ಬರಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮೂರೂವರೆ ಲಕ್ಷ ಬಿಲ್‌ ಪಾವತಿಸುವಂತೆ ಒತ್ತಡ ಹೇರುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಜು.24ರಂದು ವೃದ್ಧರು ಚಿಕಿತ್ಸೆಗಾಗಿ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ರೋಗಿಯನ್ನು ಡಿಸ್ಜಾರ್ಜ್‌ ಮಾಡಲು 3.50 ಲಕ್ಷ ಪಾವತಿಸಲು ಸೂಚಿಸಲಾಗಿದೆ. ವೃದ್ಧರ ಮಕ್ಕಳು ಈಗಾಗಲೇ 2 ಲಕ್ಷ ಬಿಲ್‌ ಪಾವತಿಸಿದ್ದಾರೆ. ಆದರೆ, ಉಳಿದ ಮೊತ್ತ ಪಾವತಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಡ ಹಾಕಲಾಗುತ್ತಿದೆ. ನಾವು ಕ್ವಾರಂಟೈನ್‌ನಲ್ಲಿದ್ದೇವೆ. ಹಣ ಹೊಂದಿಸಲು ಪರದಾಡುತ್ತಿದ್ದೇವೆ ಎಂದು ವೃದ್ಧರ ಕುಟುಂಬಸ್ಥರು ಮನವಿ ಮಾಡಿದರೂ ಆಸ್ಪತ್ರೆ ಸಿಬ್ಬಂದಿ ಒಪ್ಪುತ್ತಿಲ್ಲ ಎನ್ನಲಾಗಿದೆ. ಬಿಬಿಎಂಪಿ ದರದಲ್ಲೇ ಚಿಕಿತ್ಸೆ ಬೇಕು ಅಂದರೆ ಬೇರೆ ಆಸ್ಪತ್ರೆಗೆ ಹೋಗಿ ಎಂದು ಹಣ ಕಟ್ಟಲು ಒತ್ತಾಯಿಸುತ್ತಿದ್ದಾರೆ ಎಂದು ವೃದ್ಧರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

'ಬೆಡ್‌ ಇಲ್ಲ': ಮಂಗಳೂರಲ್ಲೂ ಶುರುವಾಯ್ತು ಹೊಸ ಗೋಳು, ಪ್ರಭಾವಿಗಳಿಗಷ್ಟೇ ಸೌಲಭ್ಯ

ಒಂದೇ ಕಟ್ಟಡದ 30 ಜನರಿಗೆ ಕೊರೋನಾ ಪಾಸಿಟಿವ್‌!

ಮಹಾಲಕ್ಷ್ಮಿ ಲೇಔಟ್‌ನಲ್ಲಿ ಒಂದೇ ಬಹುಮಹಡಿ ಕಟ್ಟಡದ 30 ಜನರಿಗೆ ಕೊರೋನಾ ದೃಢಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿತ್ತು. ಬಳಿಕ ಬಿಬಿಎಂಪಿ ಸಿಬ್ಬಂದಿ ಸೋಂಕಿತರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಅನಂತರ 30 ಜನರಿಗೆ ಸೋಂಕು ತಗುಲಿದೆ. ಅಲ್ಲದೇ ಅದರ ಪಕ್ಕದ ಬಿಲ್ಡಿಂಗ್‌ನಲ್ಲಿ ಮತ್ತೆ ಐವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆದರೆ, ಈಗಾಗಲೇ ಪಾಸಿಟಿವ್‌ ಬಂದವರಿಂದ ಸೋಂಕು ಹರಡಿದೆಯೋ ಅಥವಾ ಇತರರ ಸಂಪರ್ಕದಿಂದ ಸೋಂಕು ಬಂದಿದೆಯೋ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಸೋಂಕು ಹರಡುವ ಆತಂಕ ಎದುರಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!