ಖಾಸಗಿ ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..!

Published : May 19, 2020, 04:29 PM ISTUpdated : May 19, 2020, 06:58 PM IST
ಖಾಸಗಿ ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..!

ಸಾರಾಂಶ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ರಸ್ತೆಗೆ ಯಾವುದೇ ವಾಹನಗಳು ಇಳಿದಿರಲಿಲ್ಲ. ಹೀಗಾಗಿ ಖಾಸಗೀ ವಾಹನ ಮಾಲೀಕರು ತೆರಿಗೆ ಹೇಗಪ್ಪಾ ಕಟ್ಟೋದು ಎಂಬ ಯೋಚನೆಯಲ್ಲಿದ್ದರು. ಇವರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.

ಬೆಂಗಳೂರು, (ಮೇ.19): ಖಾಸಗಿ ವಾಹನಗಳ ಮೇಲಿನ 2 ತಿಂಗಳ ತೆರಿಗೆ ವಿನಾಯಿತಿ ನೀಡಲಾಗಿದೆ. ಖಾಸಗಿ ಟೆಂಪೋ, ಟ್ಯಾಕ್ಸಿ, ಬಸ್ಸುಗಳ ಮೇಲಿನ ಎರಡು ತಿಂಗಳ ತೆರಿಗೆ ಕಟ್ಟುವಂತಿಲ್ಲ. 

 ಲಾಕ್ ಡೌನ್ ಹಿನ್ನೆಲೆಯಲ್ಲಿ ಎರಡು ತಿಂಗಳ ಟ್ಯಾಕ್ಸ್ ಮೇಲೆ ರಾಜ್ಯ ಸಾರಿಗೆ ಇಲಾಖೆ ವಿನಾಯಿತಿ ನೀಡಿದೆ. ಒಂದು ವೇಳೆ ಈಗಾಗಲೇ ಟ್ಯಾಕ್ಸ್ ಕಟ್ಟಿರುವವರಿಗೆ ಆ ಹಣ ಮುಂದಿನ ತಿಂಗಳಿಗೆ ಕ್ಯಾರಿ ಓವರ್ ಆಗಲಿದೆ. ಇದರಿಂದ ಖಾಸಗಿ ವಾಹನ ಮಾಲೀಕರಿಗೆ ಸ್ವಲ್ಪ ಮಟ್ಟಿಗಿನ ರಿಲೀಫ್ ಸಿಕ್ಕಂತಾಗಿದೆ.

ಪ್ರಯಾಣಿಕರಿಗೆ ಬಿಗ್ ಶಾಕ್: 4 ತಿಂಗ್ಳು ಬಸ್ ರಸ್ತೆಗಿಳಿಯಲ್ಲ

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಲಾಕ್ ಡೌನ್ ನಿಂದಾಗಿ ಖಾಸಗಿ ವಾಹನಗಳ ಸಂಚಾರ ನಿಲುಗಡೆಯಾಗಿ, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಟೆಂಪೋ, ಟ್ಯಾಕ್ಸಿ, ಖಾಸಗಿ ಬಸ್ ಮೇಲಿನ ತೆರಿಗೆಯನ್ನು ಕಟ್ಟೋದಕ್ಕೆ 2 ತಿಂಗಳ ವಿನಾಯ್ತಿ ನೀಡಲಾಗಿದೆ ಎಂದು ಹೇಳಿದರು.

"

  ಈಗಾಗಲೇ ಟ್ಯಾಕ್ಸ್ ಕಟ್ಟಿದ್ರೆ ಕ್ಯಾರಿ ಓವರ್ ಆಗಲಿದ್ದು, ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.

ತೆರಿಗೆ ವಿನಾಯಿತಿ ನೀಡುವಂತೆ ಖಾಸಗಿ ಬಸ್​ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಅಲ್ಲದೇ ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಸೆಪ್ಟೆಂಬರ್​ ವರೆಗೆ ಬಸ್​ಗಳನ್ನು ರಸ್ತೆಗೆ ಇಳಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!