
ಬೆಂಗಳೂರು (ಅ.16): ಕರ್ನಾಟಕ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಸೋಲಾಪುರ ನಿವಾಸಿ ದಾನಪ್ಪ ನಾರೋನೆ ಎಂಬ ಆರೋಪಿಯನ್ನ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಬಂದ ಹಿನ್ನೆಲೆ ನಿನ್ನೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಜೀವ ಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಅಟ್ರಾಸಿಟಿ ಸೆಕ್ಷನ್ನ ಜೊತೆಗೆ ಬಿಎನ್ಎಸ್ ಸೆಕ್ಷನ್ 351 ಮತ್ತು 352ರಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು. ಬಂಧಿತ ಆರೋಪಿಯನ್ನು ಜಡ್ಜ್ ಮುಂದೆ ಹಾಜರುಪಡಿಸಿ 9 ದಿನಗಳ ಕಾನೂನು ಕಸ್ಟಡಿ ಪಡೆದಿರುವ ಶೇಷಾದ್ರಿಪುರಂ ಎಸ್ಸಿಪಿ ನೇತೃತ್ವದ ತಂಡ, ಬೆದರಿಕೆಯ ಮೂಲ ಮತ್ತು ಉದ್ದೇಶವನ್ನು ತಿಳಿಯಲು ತೀವ್ರ ವಿಚಾರಣೆ ನಡೆಸುತ್ತಿದೆ.
ದಾನಪ್ಪನಾರೋನೆಯಿಂದ ಬಂದ ಬೆದರಿಕೆಯು ರಾಜಕೀಯ ಉದ್ದೇಶಿತವೇ? ಬೇರೆ ಏನಾದರೂ ಕಾರಣಗಳಿವೆ? ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯ ಹಿನ್ನೆಲೆ ಮತ್ತು ಸಂಪರ್ಕಗಳನ್ನು ಆಳವಾಗಿ ತನಿಖೆ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ