
ಬೆಂಗಳೂರು[ಜ.16]: ಬಿಜೆಪಿಯವರ ಆಪರೇಷನ್ ಕಮಲ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳೆಲ್ಲವೂ ‘ತೋಳ ಬಂತು ತೋಳ ಕಥೆ’ ಇದ್ದಂತೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಬಳಿ ಸಾಕಷ್ಟುಶಾಸಕರ ಸಂಖ್ಯಾಬಲ ಇಲ್ಲದಿದ್ದರೂ ಆಗಾಗ ಸರ್ಕಾರ ರಚನೆಗೆ ಅಸಾಂವಿಧಾನಿಕವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಈಗಲೂ ಹಿಂಬಾಗಿಲಿನಿಂದ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳೆಲ್ಲವೂ ತೋಳ ಬಂತು ತೋಳ ಕಥೆಯಂತಾಗಿದೆ. ಸಾಂವಿಧಾನಿಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಅವರ ಜೊತೆ ಹದಿನೈದು ಶಾಸಕರಂತೂ ಹೋಗೋದಿಲ್ಲ. ಮೂರ್ನಾಲ್ಕು ಮಂದಿ ಹೋಗಿರಬಹುದು. ಬಿಜೆಪಿ ತಂತ್ರಕ್ಕೆ ಪ್ರತ್ಯುತ್ತರ ಕೊಡಲು ನಾವೂ ಸಿದ್ಧರಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ