ಇಂದು ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ!

Published : Apr 25, 2023, 12:31 AM ISTUpdated : Apr 25, 2023, 12:32 AM IST
ಇಂದು ಚುನಾವಣಾ ಪ್ರಚಾರಕ್ಕೆ  ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ!

ಸಾರಾಂಶ

ವಿಧಾನಸಭೆ ಚುನಾವಣೆಗೆ ಕೇವಲ ಹದಿನೈದು ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಲು ಕಾಂಗ್ರೆಸ್‌ ರಣತಂತ್ರ ರೂಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ತಲಾ ಹತ್ತು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು (ಏ.25) :  ರಾಜ್ಯ ವಿಧಾನಸಭೆ ಚುನಾವಣಾ ಅಖಾಡಕ್ಕೆ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರವೇಶ ಮಾಡಲಿದ್ದು, ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಭಾನುವಾರ ಹಾಗೂ ಸೋಮವಾರ ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್‌ಗಾಂಧಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ಸೋಮವಾರ ರಾತ್ರಿ ರಾಹುಲ್‌ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ರಾಜ್ಯ ಪ್ರವೇಶ ಮಾಡಲಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್‌ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ ಮೊದಲ ರೋಡ್ ಶೋ!

ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್‌ ರಾರ‍ಯಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್‌ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್‌ ರಾರ‍ಯಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

10 ದಿನ 30 ಕ್ಷೇತ್ರಗಳಲ್ಲಿ ಪ್ರಿಯಾಂಕಾ-ರಾಗಾ ಪ್ರಚಾರ!

ವಿಧಾನಸಭೆ ಚುನಾವಣೆಗೆ ಕೇವಲ ಹದಿನೈದು ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಲು ಕಾಂಗ್ರೆಸ್‌ ರಣತಂತ್ರ ರೂಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ತಲಾ ಹತ್ತು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಈ ನಾಯಕರು ನಿತ್ಯ ಮೂರು ಕ್ಷೇತ್ರಗಳಂತೆ ತಲಾ 30 ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವರು. ರಾಜ್ಯ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ನಿತ್ಯ 4-5 ಕ್ಷೇತ್ರಗಳಂತೆ ಬಹಿರಂಗ ಪ್ರಚಾರ ಅಂತ್ಯವಾಗುವ ವೇಳೆಗೆ 70-75 ಕ್ಷೇತ್ರಗಳಲ್ಲಿ ಸಂಚರಿಸಲಿದ್ದಾರೆ. ಇದೇ ವೇಳೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರು 60-65 ಕ್ಷೇತ್ರಗಳಲ್ಲಿ ಮತಯಾಚನೆ ನಡೆಸಲು ಕಾಂಗ್ರೆಸ್‌ ವೇಳಾಪಟ್ಟಿಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ.

ರಾಹುಲ್‌ಗಾಂಧಿ(Rahul gandhi) ಹಾಗೂ ಪ್ರಿಯಾಂಕಾ ಗಾಂಧಿ(Priyanak gandhi) ಅವರು ಒಂದು ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ ಸತತವಾಗಿ ಎರಡು ದಿನ ಪ್ರಚಾರ ನಡೆಸುವರು. ಈ ರೀತಿ ಅವರು ಐದು ಬಾರಿ ರಾಜ್ಯಕ್ಕೆ (ಅರ್ಥಾತ್‌ ಒಟ್ಟು 10 ದಿನ) ಆಗಮಿಸುವರು.

From the India Gate: ವಯನಾಡ್‌ನಲ್ಲಿ ಕಣಕ್ಕಿಳೀತಾರಾ ಪ್ರಿಯಾಂಕಾ ಗಾಂಧಿ..? ತಮಿಳುನಾಡಲ್ಲಿ ಬಿಜೆಪಿಯೇ ಪ್ರಮುಖ ವಿಪಕ್ಷ..!

ಇನ್ನು ಚುನಾವಣಾ ಪ್ರಚಾರದ ವೇಳೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಬಾರದು. ರಾಜ್ಯದಲ್ಲಿನ ಭ್ರಷ್ಟಾಚಾರ, ದುರಾಡಳಿತ ಹಾಗೂ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮತ ಯಾಚಿಸಬೇಕು. ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುವ ಮೂಲಕ ಚುನಾವಣೆ ಹೊಸ್ತಿಲಲ್ಲಿ ವಿವಾದ ಸೃಷ್ಟಿಸಬಾರದು ಎಂದು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು
Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು