ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್‌: ಆರೋಪಿಗಳ ಸುಳಿವು ನೀಡಿದರೆ ಬಹುಮಾನ

Kannadaprabha News   | Asianet News
Published : Sep 26, 2020, 07:24 AM IST
ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್‌: ಆರೋಪಿಗಳ ಸುಳಿವು ನೀಡಿದರೆ ಬಹುಮಾನ

ಸಾರಾಂಶ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 1400 ಕೋಟಿ ಅವ್ಯವಹಾರ| ತಲೆ ಮರೆಸಿಕೊಂಡಿರುವ ಅಧ್ಯಕ್ಷ, ನಿರ್ದೇಶಕ, ಸಾಲಗಾರ| 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಘೋಷಿತ ಅಪರಾಧಿಗಳು ಎಂದು ಘೋಷಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ| 

ಬೆಂಗಳೂರು(ಸೆ.26): ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್‌ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ.

ಈ ವಂಚನೆ ಕೃತ್ಯ ಬೆಳಕಿಗೆ ಬಂದ ನಂತರ ಬ್ಯಾಂಕ್‌ ಅಧ್ಯಕ್ಷ ಕೆ.ರಾಮಕೃಷ್ಣ, ಅವರ ಪುತ್ರ ಮತ್ತು ನಿರ್ದೇಶಕ ಕೆ.ಆರ್‌.ವೇಣುಗೋಪಾಲ್‌ ಹಾಗೂ ಸಾಲಗಾರ ಜಿ.ರಘುನಾಥ್‌ ಪತ್ತೆಗೆ ಸಿಐಡಿ ಬಲೆ ಬೀಸಿದೆ. ಆದರೆ ಇದುವರೆಗೆ ಸುಳಿವು ಸಿಕ್ಕಿಲ್ಲ. ಹೀಗಾಗಿ ಈ ಮೂರು ಆರೋಪಿಗಳ ಕುರಿತು ಸುಳಿವು ಅಥವಾ ಅವರನ್ನು ಸೆರೆ ಹಿಡಿಯುವ ಸಾರ್ವಜನಿಕರಿಗೆ ಬಹುಮಾನ ಕೊಡಲಾಗುತ್ತದೆ ಎಂದು ಸಿಐಡಿ ಎಸ್‌ಪಿ (ಡಿಟೆಕ್ವಿವ್‌) ರಾಘವೇಂದ್ರ ಕೆ.ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್‌: ಅಧ್ಯಕ್ಷನ ಬಂಧನಕ್ಕೆ ಹೈಕೋರ್ಟ್‌ ಸೂಚನೆ

ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 1400 ಕೋಟಿ ಅವ್ಯವಹಾರದ ಕುರಿತು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಪ್ರಕರಣ ದಾಖಲಾದ ಬಳಿಕ ಮೂವರು ಭೂಗತರಾಗಿದ್ದಾರೆ. ಇನ್ನು 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಘೋಷಿತ ಅಪರಾಧಿಗಳು ಎಂದು ಘೋಷಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಆರೋಪಿಗಳ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಸಿಐಡಿ ಮನವಿ ಮಾಡಿದೆ.
ಸಂಪರ್ಕಿಸಿ:

ಸಿಐಡಿ ಆರ್ಥಿಕ ಅಪರಾಧ ಗುಪ್ತದಳ ಡಿವೈಎಸ್‌ಪಿ ಮೊಬೈಲ್‌ ಸಂಖ್ಯೆ 94808 00181 ಅಥವಾ ದೂರವಾಣಿ. 080-22094485/22094498ಗೆ ಕರೆ ಮಾಡುವಂತೆ ಎಸ್ಪಿ ಕೋರಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ