ಕನ್ನಡಪರ ಹೋರಾಟಗಾರರಿಗೆ ಹಿಡನ್‌ ಅಜೆಂಡಾ ಇರುತ್ತೆ, ಅದು ಈಡೇರದಾಗ ಹೋರಾಟ ಮಾಡ್ತಾರೆ: ಸಚಿವ ರಾಜಣ್ಣ

Published : Jan 07, 2024, 06:11 AM ISTUpdated : Jan 07, 2024, 06:12 AM IST
ಕನ್ನಡಪರ ಹೋರಾಟಗಾರರಿಗೆ ಹಿಡನ್‌ ಅಜೆಂಡಾ ಇರುತ್ತೆ, ಅದು ಈಡೇರದಾಗ ಹೋರಾಟ ಮಾಡ್ತಾರೆ: ಸಚಿವ ರಾಜಣ್ಣ

ಸಾರಾಂಶ

ಹೋರಾಟಗಾರರಿಗೆ ಕೆಲ ಹಿಡನ್ ಅಜೆಂಡಾ ಇರುತ್ತದೆ. ಆ ಹಿಡನ್ ಅಜೆಂಡಾ ಈಡೇರದಿದ್ದಾಗ ಹೀಗೆ (ಬೆಂಗಳೂರಿನ ಪ್ರತಿಭಟನೆ) ಹೋರಾಟ ಆಗುತ್ತದೆ ಎಂದು ಸಹಕಾರ ಸಚಿವ ರಾಜಣ್ಣ ಕನ್ನಡಪರ ಸಂಘಟನೆಗಳು ಹಾಗೂ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಅದರ ಮುಖಂಡರ ಹೋರಾಟದ ಕುರಿತು ಪ್ರತಿಕ್ರಿಯಿಸಿದ್ದಾರೆ

ಬೇಲೂರು(ಹಾಸನ) (ಜ.7) : ಹೋರಾಟಗಾರರಿಗೆ ಕೆಲ ಹಿಡನ್ ಅಜೆಂಡಾ ಇರುತ್ತದೆ. ಆ ಹಿಡನ್ ಅಜೆಂಡಾ ಈಡೇರದಿದ್ದಾಗ ಹೀಗೆ (ಬೆಂಗಳೂರಿನ ಪ್ರತಿಭಟನೆ) ಹೋರಾಟ ಆಗುತ್ತದೆ ಎಂದು ಸಹಕಾರ ಸಚಿವ ರಾಜಣ್ಣ ಕನ್ನಡಪರ ಸಂಘಟನೆಗಳು ಹಾಗೂ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಅದರ ಮುಖಂಡರ ಹೋರಾಟದ ಕುರಿತು ಪ್ರತಿಕ್ರಿಯಿಸಿದ್ದಾರೆ.

ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ‘ಕನ್ನಡ ಪರ ಹೋರಾಟಗಾರ ನಾರಾಯಣಗೌಡ ಬಂಧನ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ತಮಿಳುನಾಡಿನಲ್ಲಿ ಯಾರೂ ತಮಿಳು ಪರವಾಗಿ, ಕೇರಳದಲ್ಲಿ ಮಲೆಯಾಳಂ ಪರ ಯಾವುದೇ ಹೋರಾಟ ನಡೆಸುವ ಸಂಘಟನೆಗಳು ಇಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಕನ್ನಡಕ್ಕಾಗಿ ಹೋರಾಟ ಮಾಡುವ ಹೋರಾಟಗಾರರು ಬಹಳಷ್ಟು ಜನ ಇದ್ದಾರೆ. ಹೋರಾಟಗಾರರು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಹೋರಾಟದಿಂದ ಆಸ್ತಿ ಹಾನಿ ಆದರೆ ಕನ್ನಡಿಗರಿಗೇ ನಷ್ಟ ತಾನೆ? ನಾವೇ ಕನ್ನಡದ ಹೆಸರಿನಲ್ಲಿ ಕನ್ನಡಿಗರ ಆಸ್ತಿ ನಾಶ ಮಾಡುವುದು ಸರಿಯಲ್ಲ’ ಎಂದರು.

ರಾಮ ಮಂದಿರ ಉದ್ಘಾಟನೆ ಆಹ್ವಾನದಲ್ಲಿ ತಾರತಮ್ಯ : ರಾಜಣ್ಣ

‘ರಾಜ್ಯದಲ್ಲಿ ನಿನ್ನೆ, ಮೊನ್ನೆಯಿಂದ ಇಂಗ್ಲಿಷ್‌ನಲ್ಲಿ ನಾಮಫಲಕ ಇವೆಯಾ? ಹಲವುವಾರು ವರ್ಷಗಳಿಂದ ಹಾಕಿದ್ದಾರೆ. ಅವುಗಳನ್ನೆಲ್ಲ ಒಂದೇ ದಿನಕ್ಕೆ ತೆಗೆಯಲು ಆಗುತ್ತಾ? ಸಚಿವ ಸಂಪುಟದಲ್ಲಿ ನಾಮಫಲಕದಲ್ಲಿ ಕನ್ನಡಕ್ಕೆ ಶೇ.60 ರಷ್ಟು ಜಾಗ ಮೀಸಲಿರಬೇಕು ಎಂದು ತೀರ್ಮಾನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!