
ಬೆಂಗಳೂರು (ಡಿ.3): ಕಂಠಪೂರ್ತಿ ಕುಡಿದು ಮದ್ಯದ ನಶೆಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಘಟನೆ ತಡರಾತ್ರಿ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂಬ ಇಬ್ಬರ ಆರೋಪಿಗಳನ್ನು ಬಂಧಿಸಿದ ಜೆಪಿ ನಗರ ಠಾಣೆಯ ಪೊಲೀಸರು.
ನಿನ್ನೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ಪಂದ್ಯವಿತ್ತು. ಜೆಪಿನಗರದ ಮೊದಲನೇ ಹಂತದಲ್ಲಿರುವ ಪಬ್ ನಲ್ಲಿ ಮದ್ಯ ಸೇವಿಸುತ್ತಾ ಪಂದ್ಯ ವೀಕ್ಷಣೆ ಮಾಡುತ್ತಿದ್ದ ಕಿಡಿಗೇಡಿಗಳು. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗ್ತಿದ್ದಂತೆ ಅಲ್ಲಿದ್ದ ಇತರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಂತರ ಪಬ್ ನಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಾಕ್ ಪರ ಘೋಷಣೆ: ಐದಕ್ಕೂ ಹೆಚ್ಚು ಜನರ ವಿರುದ್ಧ ಕೇಸು
ಘಟನೆ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಜೆಪಿ ನಗರ ಪೊಲೀಸರು ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು. ಮದ್ಯದ ನಶೆಯಲ್ಲಿ ಕೂಗಿದ್ದಾಗಿ ಪೊಲೀಸರ ಮುಂದೆ ಹೇಳಿರುವ ಆರೋಪಿಗಳು. ಸದ್ಯ ಈ ಪ್ರಕರಣ ಸಂಬಂಧ ಜೆಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಕಿಸ್ತಾನ ಪರ ಬೇಹುಗಾರಿಕೆ : ಓರ್ವ ಸೆರೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ