ನೀವು ಅಣಬೆ ಬೆಳೆದು ಹಣ ಗಳಿಸಬೇಕಾ? ಈ ಒಂದು ದಿನದ ತರಬೇತಿಗೆ ಹಾಜರಾಗಿ!

Published : Sep 30, 2024, 08:29 PM IST
ನೀವು ಅಣಬೆ ಬೆಳೆದು ಹಣ ಗಳಿಸಬೇಕಾ? ಈ ಒಂದು ದಿನದ ತರಬೇತಿಗೆ ಹಾಜರಾಗಿ!

ಸಾರಾಂಶ

ಬೆಂಗಳೂರಿನ ಹುಳಿಮಾವಿನಲ್ಲಿರುವ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರವು ಅಕ್ಟೋಬರ್ 5, 2024 ರಂದು 'ಅಣಬೆ ಬೇಸಾಯ'ದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. 

ಬೆಂಗಳೂರು (ಸೆ.30): ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ   ದಿನಾಂಕ  ಅಕ್ಟೋಬರ್ 05, 2024 ರಂದು  'ಅಣಬೆ ಬೇಸಾಯ' (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ  ಒಂದು ದಿನದ  ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ  ಭಾಗವಹಿಸಲು ಆಸಕ್ತಿಯುಳ್ಳವರು ರೂ. 250ಗಳನ್ನು  ಜೈವಿಕ  ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ  ತರಬೇತಿಯ  ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ   ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು  ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ!

ಬೆಂಗಳೂರಿನ ನಾಗಮಂಗಲ, ದೊಡ್ಡ ಬಳ್ಳಾಪುರ, ಹೊಸಕೋಟೆ ಸೇರಿದಂತೆ ವಿವಿಧೆಡೆ ಅಣಬೆ ಬೇಸಾಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಸುಲಭವಾಗಿ ಒಂದು ಕೋಣೆಯಲ್ಲಿ ಅಣಬೆ ಬೆಳಯಲು ಬೇಕಾದ ವಾತಾವರಣ ನಿರ್ಮಿಸಿ ಸುಲಭವಾಗಿ ಅಣಬೆಗಳನ್ನು ಬೆಳೆದು ಮಾರಾಟ ಮಾಡಬಹುದು, ಮಾರುಕಟ್ಟೆಯಲ್ಲಿ ಒಂದು 500 ಗ್ರಾಂ ಅಣಬೆಗೆ 40 ರೂ.ಗಳಿಂದ 80 ರೂವರೆಗೆ ಮಾರಾಟ ಮಾಡಲಾಗುತ್ತದೆ. ಮಾರುಕಟ್ಟೆಯಲ್ಲಿ ಅಣಬೆಗೆ ಉತ್ತಮ ಬೇಡಿಕೆಯಿದೆ. ಸಂಪೂರ್ಣವಾಗಿ ಬೆಳೆದ ಅಣಬೆಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟರೆ ಸುಮಾರು 7ರಿಂದ 10 ದಿನಗಳವರೆಗೆ ಸಂಗ್ರಹಿಸಿಟ್ಟು ಮಾರಾಟ ಮಾಡಬಹುದು. ಇನ್ನು ಮನೆಗೆ ಸೀಮಿತವಾಗಿ ಸಾವಯವ ಮಾದರಿಯಲ್ಲಿ ಅಣಬೆ ಬೆಳೆಯುತ್ತೇವೆ ಎನ್ನುವವರಿಗೂ ಈ ತರಬೇತಿ ಉತ್ತಮ ಸಹಕಾರಿ ಆಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ