ಬೆಂಗಳೂರು (ಸೆ.15) : ರಾಜ್ಯದಲ್ಲಿ ಸಾಕಷ್ಟುಚರ್ಚೆ ಹುಟ್ಟು ಹಾಕಿದ್ದ, ಮತಾಂತರ ನಿಷೇಧ ವಿಧೇಯಕ ಎಂದೇ ಹೇಳಲಾಗುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಗುರುವಾರ ವಿಧಾನಪರಿಷತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ. ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2022ನೇ ಸಾಲಿನ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ’ ಮಂಡಿಸುವ ಬಗ್ಗೆ ಪರಿಷತ್ತಿನ ಗುರುವಾರದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಸ್ತಾಪಿಸಲಾಗಿದೆ.
ಮತಾಂತರ ನಿಷೇಧ ಕಾಯ್ದೆಯಿಂದ ಅಭಿವೃದ್ಧಿಗೆ ಅಡ್ಡಿಯಲ್ಲ: ಸಿಎಂ ಬೊಮ್ಮಾಯಿ
ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಈ ವಿಧೇಯಕ ಅಂಗೀಕಾರಗೊಂಡಿತ್ತು. ಆದರೆ, ಸಂಖ್ಯಾಬಲದ ಕೊರತೆ ಕಾರಣ ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈ ಬಗ್ಗೆ ರಾಜ್ಯ ಸರ್ಕಾರ ಕಳೆದ ಮೇನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಿತು. ಆದರೆ, ಸುಗ್ರೀವಾಜ್ಞೆಯ ಅವಧಿ ಆರು ತಿಂಗಳು ಮಾತ್ರ. ಅಷ್ಟರೊಳಗೆ ಉಭಯ ಸದನಗಳಲ್ಲಿ ಮತ್ತೊಮ್ಮೆ ಮಂಡಿಸಿ ಅಂಗೀಕಾರ ಪಡೆಯಬೇಕಾಗುತ್ತದೆ.
ಇದೀಗ ವಿಧಾನಪರಿಷತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸ್ಪಷ್ಟಬಹುಮತ ಸಾಧಿಸಿದೆ. ಈಗ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಯಾವುದೇ ಅಡಚಣೆ ಎದುರಾಗಲಿಕ್ಕಿಲ್ಲ ಎಂಬ ಉದ್ದೇಶದಿಂದ ಮಂಡನೆಗೆ ಮುಂದಾಗಿದೆ. ಬಹುತೇಕ ಗುರುವಾರವೇ ಪರಿಷತ್ತಿನಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಕ್ಸಮರಕ್ಕೆ ನಾಂದಿ ಹಾಡುವ ಸಂಭವವಿದೆ.
ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿತ್ತು. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿ ಈ ವಿಧೇಯಕವನ್ನು ಅಂಗೀಕರಿಸಿ ಕಟ್ಟುನಿಟ್ಟಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರಬೇಕು ಎಂಬ ಉದ್ದೇಶವನ್ನು ಬಿಜೆಪಿ ಹೊಂದಿದೆ.
Anti Conversion Bill ಕರ್ನಾಟಕ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಸಹಿ
ಕಾಯ್ದೆಯಲ್ಲೇನಿದೆ?