ಆಸ್ತಿ ವಿಚಾರ: ರಾಘವೇಂದ್ರ ಮಠದ ಧರ್ಮದರ್ಶಿಯಿಂದಲೇ ಸುಪಾರಿ!

Published : Sep 11, 2023, 08:17 AM IST
ಆಸ್ತಿ ವಿಚಾರ: ರಾಘವೇಂದ್ರ ಮಠದ ಧರ್ಮದರ್ಶಿಯಿಂದಲೇ ಸುಪಾರಿ!

ಸಾರಾಂಶ

ನಗರದ ರಾಘವೇಂದ್ರಸ್ವಾಮಿ ಮಠದ ಧರ್ಮದರ್ಶಿ ಎಂದು ಹೇಳಿಕೊಳ್ಳುತ್ತಿರುವವರೇ ಮಠದ ಆಸ್ತಿ ವಿಚಾರವಾಗಿ ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿ ಸುಪಾರಿ ನೀಡಿದ್ದ ಪ್ರಕರಣವೊಂದರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಸಂಬಂಧ 8 ಆರೋಪಿಗಳನ್ನು ಬಂಧಿಸಿದ್ದಾರೆ.

ಹಾವೇರಿ (ಸೆ.11) : ನಗರದ ರಾಘವೇಂದ್ರಸ್ವಾಮಿ ಮಠದ ಧರ್ಮದರ್ಶಿ ಎಂದು ಹೇಳಿಕೊಳ್ಳುತ್ತಿರುವವರೇ ಮಠದ ಆಸ್ತಿ ವಿಚಾರವಾಗಿ ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿ ಸುಪಾರಿ ನೀಡಿದ್ದ ಪ್ರಕರಣವೊಂದರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಸಂಬಂಧ 8 ಆರೋಪಿಗಳನ್ನು ಬಂಧಿಸಿದ್ದಾರೆ.

ರಾಘವೇಂದ್ರಸ್ವಾಮಿ ಮಠ(Raghavendra swamy mutt)ದ ಧರ್ಮದರ್ಶಿ ಎಂದು ಹೇಳಿಕೊಳ್ಳುತ್ತಿರುವ ಉಡುಪಿ ಮೂಲದ, ಪ್ರಸ್ತುತ ಹಾವೇರಿ ನಿವಾಸಿ ಹರಿಕೃಷ್ಣ ಅನಂತ ರಾವ್‌ ಅವರೇ ಪ್ರಕರಣದ ಪ್ರಮುಖ ಆರೋಪಿ.

ಧಾರವಾಡ ಜಿಲ್ಲೆಯ ಮಾಂತು ಅಲಿಯಾಸ್‌ ಮಹಾಂತೇಶ ತಂದೆ ಲಕ್ಷ್ಮಣ ಜಮನಾಳ, ಸಾಗರ ತಂದೆ ತಿರುಕಪ್ಪ ಜಮನಾಳ, ಬೆಳಗಾವಿ ಜಿಲ್ಲೆಯ ಪ್ರಜ್ವಲ್ ತಂದೆ ಗಣಪತಿ ದೊತರೆ, ರಾಘವೇಂದ್ರ ತಂದೆ ಸೋಮಪ್ಪ ದೊಡ್ಡಮನಿ, ಅಜಯ್ ತಂದೆ ಹನುಮಂತಪ್ಪ ಸಾಲಹಳ್ಳಿ, ಶಿವಾನಂದ ತಂದೆ ಅರ್ಜುನ ತಗಡಿನಮನಿ, ಬೆಂಗಳೂರು ನಗರದ ವಾಸಿ ಸುನೀಲ್ ಕೆ.ಎನ್. ತಂದೆ ನಾಗರಾಜ, ಜಿ. ಚಂಗಲರಾಯಪ್ಪ ತಂದೆ ಗಜಲಪ್ಪ ಬಂಧಿತ ಆರೋಪಿಗಳು. ಪ್ರಮುಖ ಆರೋಪಿ ಹರಿಕೃಷ್ಣ ಅನಂತ ರಾವ್ ರಾಘವೇಂದ್ರ ಮಠದ ಮತ್ತು ಅದರ ಆಸ್ತಿ ವಿಚಾರವಾಗಿ ನಗರದ ನಿವಾಸಿ ಜಯರಾಮ ಕೊಲ್ಲಾಪೂರ ಎಂಬವರನ್ನು ಕೊಲೆ ಮಾಡುವ ಬಗ್ಗೆ ಒಳ ಸಂಚು ರೂಪಿಸಿ 8 ಜನ ಆರೋಪಿತರಿಗೆ ಹಣದ ಆಸೆ ತೋರಿಸಿ ಅವರಿಗೆ ಸುಪಾರಿ ಕೊಟ್ಟಿದ್ದ ಆರೋಪ ಎದುರಿಸುತ್ತಿದ್ದಾರೆ.

 

ಹುನ್ನೂರು ವರ್ತಕನ ಹತ್ಯೆಗೆ ಸಂಚು, ಐವರು ಸುಪಾರಿ ಹಂತಕರ ಬಂಧ‌ನ

ಪ್ರಕರಣದ ಹಿನ್ನೆಲೆ:

ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ದೇವಗಿರಿ ಯಲ್ಲಾಪುರ ಪೆಟ್ರೋಲ್ ಬಂಕ್ ಹತ್ತಿರ ಕಳೆದ ಆ.10ರಂದು ಸಂಜೆ 4.30ರ ವೇಳೆಗೆ ಜಯರಾಮ ಕೊಲ್ಲಾಪುರ ಮತ್ತು ಅವರ ಮಗ ವಾದಿರಾಜ ಕೊಲ್ಲಾಪುರ ಅವರು ತಮ್ಮ ಬೈಕ್‌ನಲ್ಲಿ ಹಾವೇರಿ ಕಡೆಗೆ ಬರುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಮೋಟಾರ್‌ ಸೈಕಲ್‌ ಮೇಲೆ ಬಂದು ಜಯರಾಮ ಅವರು ಹೋಗುತ್ತಿದ್ದ ಬೈಕನ್ನು ಬೆನ್ನು ಹತ್ತಿ ಹಿಂದಿನಿಂದ ಬಂದು ಜಯರಾಮನ ಬೆನ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹರಿಕೃಷ್ಣನಿಂದ ಸುಪಾರಿ ಪಡೆದು ತಾವು ಕೊಲೆಗೆ ಯತ್ನಿಸಿದ್ದಾಗಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಪ್ರಮುಖ ಆರೋಪಿಯಾದ ಹರಿಕೃಷ್ಣ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ ಎಂದು ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್‌ ಸಂತೋಷ ಪವಾರ್‌ ಮಾಹಿತಿ ನೀಡಿದ್ದಾರೆ. 

ಅತ್ತಿಗೆಯ ಕೊಲೆಗೆ ಮೈದುನನಿಂದಲೇ ಸುಪಾರಿ! ಯೋಧನಿಗೆ ಅತ್ತಿಗೆ ಕೆಲಸದ ಮೇಲೆ ಕಣ್ಣು!

 

ಪ್ರಕರಣ ಭೇದಿಸಿ ಆರೋಪಿತರನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಡಿವೈಎಸ್ಪಿ ಎಂ.ಎಸ್‌. ಪಾಟೀಲ, ಸಿಪಿಐ ಎಸ್.ಕೆ. ಪವಾರ್, ಗ್ರಾಮೀಣ ಠಾಣೆಯ ಪಿಎಸ್ಐ ರವಿಕುಮಾರ, ಎಸ್.ಪಿ. ಹೊಸಮನಿ ಹಾಗೂ ಸಿಬ್ಬಂದಿಯಾದ ವೈ.ಎಫ್. ತಹಸೀಲ್ದಾರ, ಸುರೇಶ ನಾಯಕ, ಎಂ.ಕೆ. ನದಾಫ್‌, ಮಾರುತಿ ಹಾಲಬಾವಿ, ಸತೀಶ ಮಾರಕಟ್ಟೆ ಅವರಿಗೆ ಎಸ್ಪಿ ಡಾ.ಶಿವಕುಮಾರ ಗುಣಾರೆ ಬಹುಮಾನ ಘೋಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ