ಯಾದಗಿರಿ: ಪಿಎಸ್‌ಐ ಅಕ್ರಮ ದೂರು ನಿರ್ಲಕ್ಷಿಸಿದ್ದವರಿಗೆ ಕಂಟಕ?

Published : Aug 08, 2022, 02:00 AM IST
ಯಾದಗಿರಿ: ಪಿಎಸ್‌ಐ ಅಕ್ರಮ ದೂರು ನಿರ್ಲಕ್ಷಿಸಿದ್ದವರಿಗೆ ಕಂಟಕ?

ಸಾರಾಂಶ

ಜನವರಿಯಲ್ಲೇ ಜಿಲ್ಲಾಡಳಿತ, ಪೊಲೀಸರಿಗೆ ಪತ್ರ ಬರೆದಿದ್ದ ಅಭ್ಯರ್ಥಿ, ಸಿಐಡಿಯಿಂದ ಎಸ್ಪಿ ವಿಚಾರಣೆ ಸಾಧ್ಯತೆ

ಆನಂದ್‌ ಎಂ.ಸೌದಿ

ಯಾದಗಿರಿ(ಆ.07):  ಪಿಎಸ್‌ಐ ಪರೀಕ್ಷಾ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಜನವರಿಯಲ್ಲೇ ನೊಂದ ಅಭ್ಯರ್ಥಿಯೊಬ್ಬರು ದೂರು ನೀಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸದ ವಿಚಾರ ಇದೀಗ ಯಾದಗಿರಿ ಎಸ್ಪಿ ಮತ್ತು ಜಿಲ್ಲಾಡಳಿತಕ್ಕೆ ತಲೆನೋವಾಗುವ ಸಾಧ್ಯತೆಗಳಿವೆ. ಈ ವಿಚಾರವಾಗಿ ಸಿಐಡಿ ಅಧಿಕಾರಿಗಳು ಯಾದಗಿರಿ ಎಸ್ಪಿ ಡಾ. ವೇದಮೂರ್ತಿ, ಜಿಲ್ಲಾಡಳಿತವನ್ನೂ ವಿಚಾರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಜ.19ರಂದು ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿಪ್ರಕಟಗೊಂಡಿತ್ತು. ಈ ನೇಮಕದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಜ.28 ರಂದೇ ಜಿಲ್ಲಾಡಳಿತಕ್ಕೆ ರಾಮಚಂದ್ರ ಬಲಶೆಟ್ಟಿಹಾಳ್‌ ಎನ್ನುವವರು ದೂರು ನೀಡಿದ್ದರು. ಆ ಪತ್ರದಲ್ಲಿ ಸಿದ್ದುಗೌಡ ಹೆಸರು ಉಲ್ಲೇಖಿಸಿ, ಹಲವು ಮಹತ್ವದ ಮಾಹಿತಿಗಳನ್ನೂ ಉಲ್ಲೇಖಿಸಿದ್ದರು. ಪಿಎಸ್‌ಐ ನೇಮಕಾತಿ ಅಕ್ರಮ ಬಯಲಿಗೆಳೆದ ‘ಕನ್ನಡಪ್ರಭ’ದ ಸರಣಿ ವರದಿಗಳಲ್ಲಿ ಫೆ.1ರಂದು ಇದರ ಉಲ್ಲೇಖವೂ ಇತ್ತು. ಆ ಬಳಿಕ ಸಿಐಡಿ ತನಿಖೆ ಆರಂಭವಾದರೂ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳು ಈ ಪತ್ರದ ಬಗ್ಗೆ ಮೌನ ಮುಂದುವರಿಸಿದಾಗ ಮೇ 10 ರಂದು ಮತ್ತೊಂದು ವರದಿಯನ್ನು ‘ಕನ್ನಡಪ್ರಭ’ ಪ್ರಕಟಿಸಿತ್ತು. ಆ ಬಳಿಕ ಎಚ್ಚೆತ್ತ ಪೊಲೀಸ್‌ ಅಧಿಕಾರಿಗಳು ಸಿಐಡಿ ಅಧಿಕಾರಿಗಳಿಗೆ ಈ ಪತ್ರ ಕಳುಹಿಸಿದ್ದರು.

ಬ್ಲೂಟೂತ್ ಅಭ್ಯರ್ಥಿಗಳಿಗೆ KPSC ಶಾಶ್ವತ ಡಿಬಾರ್ !

ಎಸ್ಪಿಗೇ ಮಾಹಿತಿ ಇಲ್ಲ?:

ಪ್ರಕರಣದ ಅಕ್ರಮ ಬಯಲಾದ ಬಳಿಕವೂ ಇಂಥದ್ದೊಂದು ದೂರಿನ ಬಗ್ಗೆ ಗುಪ್ತಚರ ಅಥವಾ ಇಲಾಖೆ ಸಿಬ್ಬಂದಿ ಈ ಪತ್ರದ ಕುರಿತು ಮಾಹಿತಿ ನೀಡಿರಲಿಲ್ಲವೇ? ಅಥವಾ ಜಿಲ್ಲಾ ವರಿಷ್ಠಾಧಿಕಾರಿಗೆ ಈ ಪತ್ರ ತಲುಪುವ ಮುನ್ನವೇ ಕಚೇರಿಯಲ್ಲೇ ದೂರು ಪತ್ರ ನಾಶ ಪಡಿಸಲಾಯಿತೇ? ಎಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ.

ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರ ವಿಳಾಸಕ್ಕೆ ಬರೆದ ಪತ್ರವನ್ನು ಆಗಲೇ ಕಳುಹಿಸಿದ್ದೇವೆ ಎಂದು ಜಿಲ್ಲಾಡಳಿತ ಸಮರ್ಥಿಸಿಕೊಳ್ಳುವ ಯತ್ನ ನಡೆಸಿದೆಯಾದರೂ, ಗಂಭೀರ ಅಪರಾಧ-ಅಕ್ರಮ ವಿಚಾರದಲ್ಲಿ ಸಾರ್ವಜನಿಕರ ಅರ್ಜಿಗಳ ಮೇಲೆ ಕಣ್ಣಾಡಿಸಬೇಕಿದ್ದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸಿದ್ದು ಯಾಕೆ ಎಂಬುದು ತೀವ್ರ ಚರ್ಚೆಗೆ ಕಾರಣವಾಗಿದೆ.

PSI Recruitment Scam: ಮೆಟಲ್‌ ಡಿಟೆಕ್ಟರ್‌ ಸರಿಯಿಲ್ಲ ಅಂತ ಬುರುಡೆ ಬಿಟ್ರಾ ಸಿಬ್ಬಂದಿ?

ಸಿದ್ದುಗೌಡ ಬಂಧಿಸಿರುವ ಆರೋಪಿಗಳು: ಬಲ್ಲ ಮೂಲಗಳ ಪ್ರಕಾರ, ಸಿದ್ದುಗೌಡ ಸೇರಿ 8 ಆರೋಪಿಗಳ ಬಂಧನಕ್ಕೂ ಮುನ್ನ ಅವರ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ವಾಪಸ್‌ ಕಳುಹಿಸಿದ್ದರು. ವಾಪಸಾದವರು ತಾವು ಆರೋಪಮುಕ್ತ ಎಂದುಕೊಂಡು ಹಳೆಯ ವ್ಯಕ್ತಿಗಳ ಸಂಪರ್ಕಿಸಿದ್ದರು. ಇವರ ಮೇಲೆ ಕಣ್ಣಿಟ್ಟಿದ್ದ ಸಿಐಡಿ ಮತ್ತಷ್ಟುಮಾಹಿತಿಗಳನ್ನು ಕಲೆ ಹಾಕಿದ್ದು, ಯಾದಗಿರಿ ಎಸ್ಪಿ ಮನೆಗೆ ಕೂಗಳತೆ ದೂರದಲ್ಲಿರುವ ಮೀಸಲು ಪಡೆ ಪೊಲೀಸ್‌ ವಸತಿ ನಿಲಯದಲ್ಲೇ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳಿಗೆ ಬ್ಲೂಟೂತ್‌ ಬಳಸುವ ಕುರಿತು ತರಬೇತಿ ಸಹ ನೀಡಲಾಗಿತ್ತು ಅನ್ನೋ ಆಘಾತಕಾರಿ ಅಂಶ ಸಿಐಡಿಗೆ ವಿಚಾರಣೆ ವೇಳೆ ಬಯಲಾಗಿದೆ ಎನ್ನಲಾಗಿದೆ.

ಜಿಲ್ಲಾಡಳಿತಕ್ಕೆ ನೊಂದ ಅಭ್ಯರ್ಥಿ ದೂರು ಪತ್ರ ಕೊಟ್ಟಿದ್ದಾರೆ, ಆದರೆ ಪೊಲೀಸ್‌ ಕಚೇರಿಗೆ ಬಂದಿಲ್ಲ. ಇಂಥದ್ದೊಂದು ಪತ್ರ ಇದೆ ಎಂದು ಗೊತ್ತಾದ ತಕ್ಷಣ ಅದನ್ನು ಸಿಐಡಿಗೆ ಕಳುಹಿಸಿದ್ದೇನೆ ಅಂತ ಯಾದಗಿರಿ ಎಸ್ಪಿ ಡಾ. ವೇದಮೂರ್ತಿ ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್