
ಕೋಲಾರ[ನ.18]: ಆರೋಪಿಯೊಬ್ಬನಿಗೆ ಥಳಿಸಿ, ಡ್ಯಾನ್ಸ್ ಮಾಡಿಸಿದ ಆರೋಪದ ಹೊತ್ತಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೇತಮಂಗಲ ಠಾಣೆಯ ಸಬ್ಇನ್ಸ್ಪೆಕ್ಟರ್ ಹೊನ್ನೇಗೌಡ ಅವರನ್ನು ಸೇವೆಯಿಂದ ಅಮಾನಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹೊನ್ನೇಗೌಡ ಆರೋಪಿಯನ್ನು ಠಾಣೆಗೆ ಕರೆತಂದು, ಡ್ಯಾನ್ಸ್ ಮಾಡಿಸಿದ್ದಲ್ಲದೇ, ತಾನೂ ಕೂಡ ನೃತ್ಯ ಮಾಡಿದ್ದ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ಪಿಎಸ್ಐ ಬೋವಿ ಸಮುದಾಯ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಮುದಾಯದ ಮುಖಂಡರು ಶನಿವಾರ ಠಾಣೆ ಮುಂದೆ ಪ್ರತಿಭಟಿಸಿದ್ದರು.
ಇದನ್ನು ಓದಿ: ಠಾಣೆಯಲ್ಲಿ ಆರೋಪಿ ಎದುರೇ ಕುಣಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್!
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಡಿವೈಎಸ್ಪಿ ಶ್ರೀನಿವಾಸಮೂರ್ತಿ ತನಿಖೆ ನಡೆಸಿ ಎಸ್ಪಿಗೆ ವರದಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪ ಮಾಡಿರುವ ಆರೋಪ ಮೇಲೆ ಪಿಎಸ್ಐ ಹೊನ್ನೇಗೌಡ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ