
ಹಾಸನ (ಸೆ.14) ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಲಾರಿ ಹರಿದು 10 ಜನರು ಮೃತಪಟ್ಟ ಪ್ರಕರಣ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಘಟನೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾದರು.
ಬಡಕುಟುಂಬಕ್ಕೆ ಇನ್ನಷ್ಟು ನೆರವು ನೀಡಲು ಆರ್ ಅಶೋಕ್ ಒತ್ತಾಯ:
ಅಪಘಾತ ಸ್ಥಳಕ್ಕೆ ಮತ್ತು ಗಾಯಳು ಇರುವ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಇಡೀ ರಾಜ್ಯದ ಜನತೆಗೆ ದಿಗ್ಭ್ರಮೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿರುವುದು ಒಳ್ಳೆಯದು. ಆದರೆ, ಇದು ಸಾಕಾಗುವುದಿಲ್ಲ. ಬಡತನದಲ್ಲಿರುವ ಕುಟುಂಬಗಳಿಗೆ ಇನ್ನಷ್ಟು ನೆರವು ನೀಡಬೇಕೆಂದು ನಾನು ಸರ್ಕಾರದ ಜೊತೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಅಪಘಾತದ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ಕ್ರಮ ಕೈಗೊಂಡಿದ್ದರೂ ಜನರ ಮೇಲೆ ಟ್ರಕ್ ಹರಿದಿದೆ. ಇಂತಹ ಮೆರವಣಿಗೆಗಳು ನಡೆಯಬೇಕಾದರೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಇರಬೇಕಾಗಿತ್ತು. ಸ್ಥಳೀಯರು ಹಲವು ಬಾರಿ ಹಂಪ್ ಹಾಕಬೇಕೆಂದು ಒತ್ತಾಯಿಸಿದ್ದರು. ನಾನು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಕ್ಷಣ ಹಂಪ್ ಹಾಕಲು ಸೂಚಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ