
ಚಾಮರಾಜನಗರ (ನ.16): ರಾಹುಲ್ ಗಾಂಧಿ ಓರ್ವ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ವೇಳೆ, ಚುನಾವಣೆ ನಂತರ ವಿದೇಶಕ್ಕೆ ಹೋಗುತ್ತಾರೆ. ಬರಿ ದೇಶ, ವಿದೇಶ ಸುತ್ತುವುದೇ ಇವರ ಕೆಲಸವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗಾಂಧಿ ಕುಟುಂಬದ ವಿರುದ್ಧ ಕಿಡಿ ಕಾರಿದರು. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮಾತ್ರ ಇವಿಎಂ ಸರಿಯಾಗಿರುತ್ತೆ. ಬಿಜೆಪಿ ಅಥವಾ ಬೇರೆ ಪಕ್ಷ ಗೆದ್ರೆ ಕಾಂಗ್ರೆಸ್ನವರಿಗೆ ಇವಿಎಂನಲ್ಲಿ ಮೋಸ ಆಗಿರುತ್ತೆ ಎಂದು ತಿರುಗೇಟು ನೀಡಿದರು.
ಇವರ ಮತ ಚೋರಿ ಸುಳ್ಳಿನ ಕಂತೆಯನ್ನು ದೇಶದ ಜನ ಒಪ್ಪಿಲ್ಲ. ಗಾಂಧಿ ಕುಟುಂಬದ ಆಟ ಇನ್ನು ಯಾವುದೇ ಕಾರಣಕ್ಕೂ ನಡೆಯುವುದಿಲ್ಲ. ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಡಮ್ಮಿ ಆಗಿದ್ದಾರೆ. ಇನ್ಮೇಲೆ ರಾಜ್ಯದಲ್ಲಿ ಏನಿದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದೆ ಪ್ರಾಬಲ್ಯ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸ್ತ್ರ ಬಿಹಾರ ಚುನಾವಣೆಯಲ್ಲಿ ವರ್ಕೌಟ್ ಆಗಿಲ್ಲ ಎಂದರು.
ಬಿಹಾರ ಚುನಾವಣೆಯ ಫಲಿತಾಂಶದ ಬಳಿಕ ಸಿದ್ದರಾಮಯ್ಯ ಪ್ರಾಬಲ್ಯರಾಗಿದ್ದಾರೆ. ಸಿಎಂ ಕುರ್ಚಿಯನ್ನು ಸಿದ್ದರಾಮಯ್ಯ ಬಿಟ್ಟು ಕೊಡಲ್ಲ. ಡಿ.ಕೆ .ಶಿವಕುಮಾರ್ ಸುಮ್ನೆ ಇರೋಲ್ಲ, ಇವರಿಬ್ಬರ ತಿಕ್ಕಾಟದ ಮಧ್ಯೆ ಸರ್ಕಾರ ಬಿದ್ದು ಹೋಗುತ್ತೆ. ಆಗ, ಮಧ್ಯಂತರ ಚುನಾವಣೆ ಬರಲಿದೆ. ಚುನಾವಣೆಯನ್ನು ಎದುರಿಸಲು ಬಿಜೆಪಿ-ಜೆಡಿಎಸ್ ಸಿದ್ಧವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ