ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ಅನರ್ಹತೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published : Jul 13, 2023, 04:58 AM ISTUpdated : Jul 13, 2023, 05:26 AM IST
ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ಅನರ್ಹತೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಾರಾಂಶ

ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಬುಧವಾರ ಇಡೀ ದಿನ ನಗರದ ಡಾ. ಅಂಬೇಡ್ಕರ್‌ ವೃತ್ತದ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ಬೀದರ್‌ (ಜು.13) : ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಬುಧವಾರ ಇಡೀ ದಿನ ನಗರದ ಡಾ. ಅಂಬೇಡ್ಕರ್‌ ವೃತ್ತದ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು.

ರಾಹುಲ್‌ ಗಾಂಧಿ ಅವರು ವಿವಿಧ ವೇದಿಕೆಗಳಲ್ಲಿ ಮೋದಿ ಹಾಗೂ ಅದಾನಿ ನಡುವಿನ ಸಂಬಂಧ ಪ್ರಶ್ನಿಸಿ, ಬಹಿರಂಗ ಪಡಿಸುತ್ತಿರುವುದನ್ನು ಸಹಿಸಿಕೊಳ್ಳದೆ, ಮೋದಿ ಹಾಗೂ ಬಿಜೆಪಿ ನಾಯಕರು ಅವರನ್ನು ದೋಷಿ ಎಂದು ಸಾಬೀತುಪಡಿಸಲು ಹಾಗೂ ಅವರ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವ ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ರಾಹುಲ್‌ ಗಾಂಧಿಯಿಂದ ಮತ್ತೊಂದು ಭಾರತ್‌ ಜೋಡೋ ಯಾತ್ರೆ: ಈಸ್ಟ್‌ ಟು ವೆಸ್ಟ್‌ ಶೀಘ್ರ ಆರಂಭ

ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಜಶೇಖರ ಪಾಟೀಲ್‌, ಎಐಸಿಸಿ ಸದಸ್ಯ ಆನಂದ ದೇವಪ್ಪ, ಅಮೃತರಾವ ಚಿಮಕೋಡೆ. ಎಂಎ ಸಮೀ, ದತ್ತಾತ್ರಿ ಮೂಲಗೆ, ಅಜಮತ ಪಟೇಲ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಚುನಾಯಿತ ಪ್ರತಿನಿಧಿ​ಗಳು, ಮುಖಂಡರು ಜಿಲ್ಲಾ, ಮುಂಚೂಣಿ ಘಟಕಗಳ ಪದಾಧಿ​ಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬಸವಕಲ್ಯಾಣದಲ್ಲಿಯೂ ಕಾಂಗ್ರೆಸ್‌ ಪ್ರತಿಭಟನೆ:

ಬಸವಕಲ್ಯಾಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿಯವರು ರಾಜಕೀಯ ಷಡ್ಯಂತ್ರವನ್ನು ನಡೆಸುತ್ತಿದ್ದಾರೆ ಎಂದು ನಗರದ ಗಾಂಧಿ ವೃತ್ತದ ಹತ್ತಿರ ಮೌನ ಪ್ರತಿಭಟನೆ ನಡೆಸಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್‌ ಸಿಂಗ್‌ ಮಾತನಾಡಿ, ಬಿಜೆಪಿ ನಡೆಸುತ್ತಿರುವ ಕುತಂತ್ರವನ್ನು ದೇಶದ ಜನತೆ ಗಂಭೀರವಾಗಿ ಪರಿಗಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಸೋನಿಯಾ ಬಂಗಲೆಯಿಂದ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಗೆ ಸ್ಥಳಾಂತರಕ್ಕೆ ನಿರ್ಧರಿಸಿದ ರಾಹುಲ್!

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ನೀಲಕಂಠ ರಾಠೋಡ್‌ ಮಾತನಾಡಿದರು. ಮೀರ್‌ ಅಜ್ಹರ್‌ ಅಲಿ ನವರಂಗ್‌, ಶಾಂತಪ್ಪ ಪಾಟೀಲ…, ಬಸವರಾಜ್‌ ಸ್ವಾಮಿ, ಆನಂದ್‌ ಪಾಟೀಲ…, ಜಗನಾತ್‌ ಪಾಟೀಲ್‌ ಮಂಠಾಳ,ಅಮಾನತ್‌ ಅಲಿ ಅಡ್ವಕೆಚ್‌, ಶಂಕರ್‌ ಜಮಾದಾರ್‌, ಚಂದ್ರಕಾಂತ್‌ ಮೇತ್ರೆ, ಸುಧಾಕರ್‌, ರಾಯೀಸ್‌ ಶೇಕ…, ಡಾ. ಖದೀರುದ್ದಿನ್‌, ಪ್ರುಥ್ವಿಗಿರಿ ಗೋಸ್ವಾಮಿ, ನಗರಸಭೆ ಸದಸ್ಯರಾದ ರವೀಂದ್ರ ಬೊರಳೆ, ರಾಮ್‌ ಜಾಧವ…, ಮಹೋನಾರ್‌ ಮೈಸೆ, ಖಲೀಲ್‌ ಸಾಬ…, ಸೈಯದ್‌ ನವಾಜ್‌, ಸಿದ್ರಾಮಪ್ಪ ಗುದಗೆ, ಮಿರ್‌ ತಹಸಿನ್‌ ಅಲಿ ಜಮಾರ್ದಾ, ಸವಿತಾ ಕಾಂಬಳೆ, ಶಿವಕುಮಾರ್‌ ಶೆಟಕಾರ, ಸಂತೋಷ್‌ ಗುತ್ತೇದಾರ, ಶರಣು ಅಲಗೂಡ, ಶಿವಕುಮಾರ್‌ ಬಿರಾದರ, ಬಸು ಬಿರಾದರ, ಮೇಘನಾಥ ಕಾರಬಾರಿ, ರಾಮದಾಸ್‌ ಭಕನಳ, ಯುುವರಾಜ ಭೆಂಡೆ, ಯೋಗೇಶ್‌ ಗುತ್ತೇದಾರ, ಆನಂದ್‌ ಹೊನ್ನನಾಯಕ…, ರಾಜಕುಮಾರ್‌ ಸುಗುರೆ ಸೇರಿದಂತೆ ಅನೇಕ ಕಾಂಗ್ರೆಸ್‌ ನಾಯಕರು ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ