ರಾತ್ರಿ ಮಲಗಿದ್ದ ತಾಯಿ-ಮಗನಿಗೆ ಕಚ್ಚಿದ ಹಾವು! ಬೆಳಗಾಗುವಷ್ಟರಲ್ಲಿ ಇಬ್ಬರೂ ಸಾವು!

Published : Jun 30, 2025, 01:34 PM IST
Raichur Snake Bite

ಸಾರಾಂಶ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ತಾಯಿ ಮತ್ತು ಮಗನಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ರಾತ್ರಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹಾವು ಕಚ್ಚಿದ ವಿಷಯ ತಡವಾಗಿ ಗೊತ್ತಾದ್ದರಿಂದ ಚಿಕಿತ್ಸೆ ತಕ್ಷಣವೇ ದೊರೆಯದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಾಯಚೂರು (ಜೂ. 30): ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತರು – ಸುಬ್ಬಮ್ಮ (35) ಮತ್ತು ಅವರ ಪುತ್ರ ಬಸವರಾಜ್ (10 ವರ್ಷ) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದೆ. ಅವರು ಒದ್ದಾಡುವುದನ್ನು ನೋಡಿದ ಮನೆಯವರು ತಾಯಿ ಮತ್ತು ಮಗನನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ಮಧ್ಯರಾತ್ರಿ ವಾಹನವನ್ನು ತಯಾರಿ ಮಾಡಿಕೊಂಡಿ ಆಸ್ಪತ್ರೆಗೆ ಹೋಗುವಷ್ಟರಲ್ಲಿ ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಹಾವು ಕಚ್ಚಿದ ಸಂದರ್ಭ ಅವರು ಮಲಗಿದ್ದರಿಂದ ತಕ್ಷಣ ಗೊತ್ತಾಗಿಲ್ಲ. ಇನ್ನು ವಿಷ ದೇಹಕ್ಕೆ ಆವರಿಸಿಕೊಂಡು ಹಾವು ಕಚ್ಚಿದ ಘಟನೆ ಗೊತ್ತಾಗುವಷ್ಟರಲ್ಲಿ ತಡವಾಗಿತ್ತು. ಆದ್ದರಿಂದ ಹಾವು ಕಚ್ಚಿದ ತಕ್ಷಣವೇ ವಿಷಯ ಗೊತ್ತಾಗದ ಕಾರಣ ಚಿಕಿತ್ಸೆ ನೀಡಲು ಕೂಡ ವಿಳಂಬವಾಗಿದೆ. ಇನ್ನು ಸ್ಥಳೀಯರ ಪ್ರಕಾರ, ಗ್ರಾಮದಲ್ಲಿ ಇತ್ತೀಚೆಗೆ ಹಾವು ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿದ್ದು, ಈ ಘಟನೆಯು ಜನರಲ್ಲಿ ಆತಂಕ ಹೆಚ್ಚಿಸಿದೆ. ಗ್ರಾಮಸ್ಥರು ಈಗ ಸುರಕ್ಷತಾ ಕ್ರಮಗಳ ಕುರಿತು ಹೆಚ್ಚು ಎಚ್ಚರಿಕೆಯಾಗಬೇಕೆಂದು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದಿಂದ ಸಲಹೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌