20 ದಿನಗಳ ಬಳಿಕ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು

Published : Aug 20, 2023, 04:42 AM IST
20 ದಿನಗಳ ಬಳಿಕ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು

ಸಾರಾಂಶ

ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ 6.5 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ 

ಬೆಂಗಳೂರು(ಆ.20): ಕಳದೆ 20 ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಮತ್ತೆ ಚುರುಕುಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಶನಿವಾರ ಮತ್ತೆ ಮಳೆಯಾಗಿದೆ. ಈ ಮಧ್ಯೆ, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡ್ಮೂರು ವಾರಗಳಿಂದ ರಾಜ್ಯಾದ್ಯಂತ ಮಳೆ ನಾಪತ್ತೆಯಾಗಿದ್ದು, ರೈತರಲ್ಲಿ ಆತಂಕ ಮನೆಮಾಡಿತ್ತು. ಇದರ ನಡುವೆಯೇ ಇದೀಗ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಾದ್ಯಂತ ಶುಕ್ರವಾರ ಸಂಜೆಯಿಂದಲೇ ಮಳೆ ಆರಂಭವಾಗಿದ್ದು, ರಾತ್ರಿ ದಿನವಿಡೀ ವರುಣನ ಅಬ್ಬರವಾಗಿದೆ. ದಿಢೀರ್‌ ಮಳೆಯಿಂದಾಗಿ ತುಂಗಾ ನದಿಯಲ್ಲಿ ನೀರಿನಮಟ್ಟಕೊಂಚ ಏರಿಕೆಯಾಗಿದೆ.

ಮಳೆಗಾಗಿ ಬೈರೇದೇವರಿಗೆ ರೈತರ ವಿಶೇಷ ಪೂಜೆ

ಯೆಲ್ಲೋ ಅಲರ್ಟ್‌ ಎಚ್ಚರಿಕೆ: 

ಈ ಮಧ್ಯೆ, ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ 6.5 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿ ಜಿಲ್ಲೆಯ ಕೋಟದಲ್ಲಿ ಅತಿ ಹೆಚ್ಚು 7 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡದ ಹೊನ್ನಾವರದಲ್ಲಿ 6, ಕುಂದಾಪುರ, ಮಂಕಿ ಹಾಗೂ ಮಂಗಳೂರು ವಿಮಾನ ನಿಲ್ದಾದಲ್ಲಿ ತಲಾ 5, ಮಾಣಿ, ಪಣಂಬೂರು, ಕ್ಯಾಸಲ್‌ ರಾಕ್‌, ಗೇರುಸೊಪ್ಪ, ವಿರಾಜಪೇಟೆಯಲ್ಲಿ ತಲಾ 4, ಗೋಕರ್ಣ, ಕದ್ರಾ, ಶಿರಾಲಿ, ಕುಮಟಾ, ಕಾರ್ಕಳ, ಸಿದ್ದಾಪುರ, ಪುತ್ತೂರು, ಉಪ್ಪಿನಂಗಡಿ, ಸೋಮವಾರ ಪೇಟೆ, ಭಾಗಮಂಡಲ, ಕೊಟ್ಟಿಗೆಹಾರ, ಲಿಂಗನಮಕ್ಕಿ ಸೇರಿದಂತೆ ವಿವಿಧ ಕಡೆ ತಲಾ 3 ಸೆಂ.ಮೀ. ಮಳೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಜನಪ್ರಿಯತೆ ಸಹಿಸಲು ಸಂಕಷ್ಟ: ಬಿ.ವೈ.ವಿಜಯೇಂದ್ರ
ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ