ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

Published : Jul 20, 2021, 08:07 AM IST
ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

ಸಾರಾಂಶ

ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ ಹಲವೆಡೆ ಮಳೆಯಿಂದ ಭಾರಿ ಅನಾಹುತ 

ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 

ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ  ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ಸೇತುವೆಗಳು ಮುಳುಗಿ ಜಲಾವೃತಗೊಂಡಿವೆ. 

4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್‌ ಅಲರ್ಟ್‌

60 ಮನೆಗಳು ಮಳೆಯಿಂದ ಕುಸಿದು ಬಿದ್ದಿವೆ. ಮತ್ತು 300 ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗಿದೆ. 

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬದನೂರು ಗ್ರಾಮ ಕೆರೆಯ ಒಡ್ಡು ಒಡೆದು ನೀರೆಲ್ಲಾ ಹಳ್ಳದ ಪಾಲಾಗಿದೆ. ನೂರಾರು ಎಕರೆ ಭತ್ತ ನಾಟಿ ಮಾಡಿರುವ ಪ್ರದೇಶವೆಲ್ಲಾ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಂಪುಟದ ಖಾತೆ ಹಂಚಿಕೆ ಪ್ರಕಟ: ಇಲ್ಲಿದೆ ಸಚಿವರ ಪೂರ್ಣ ಪಟ್ಟಿ
ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ದಾಳಿ, ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ!