
ಶಿವಮೊಗ್ಗ (ಏ.12): ಬಿಜೆಪಿಯ ಜನಾಕ್ರೋಶ ರಾಲಿಯ ವೇದಿಕೆಯಲ್ಲಿ ನಡೆದ ಭಾಷಣದ ವೇಳೆ ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸುವರ್ಣ ನ್ಯೂಸ್ಗೆ ಈ ಘಟನೆಯ ಎಕ್ಸ್ಕ್ಲೂಸಿವ್ ವಿಡಿಯೋ ಲಭ್ಯವಾಗಿದೆ.
ಮಳೆಯ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ, ದಿಡೀರ್ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ವೇದಿಕೆಯ ಹಿಂಭಾಗದಲ್ಲಿ ಭಾರಿ ಗಾತ್ರದ ಮರದ ರೆಂಬೆಯೊಂದು ಧರೆಗುರುಳಿತು. ಈ ವೇಳೆ ವೇದಿಕೆಯ ಹಿಂಭಾಗದಲ್ಲಿ ತೆರಳುತ್ತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರು ಮರದ ರೆಂಬೆ ಬೀಳುವ ಶಬ್ದಕ್ಕೆ ಕಂಗಾಲಾಗಿ ಹಿಂತಿರುಗಿ ಓಡಿದರು. ಅದೃಷ್ಟವಶಾತ್, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ: ವಿಜಯೇಂದ್ರ ಆರೋಪ
ಮರದ ರೆಂಬೆ ವೇದಿಕೆಗೆ ಸಮೀಪವೇ ಬಿದ್ದಿದ್ದು, ಇದು ಸ್ವಲ್ಪ ದೊಡ್ಡದಿದ್ದರೆ ಅಥವಾ ವೇದಿಕೆಯ ಮೇಲೆ ಬಿದ್ದಿದ್ದರೆ, ಭಾಷಣ ಮಾಡುತ್ತಿದ್ದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ವೇದಿಕೆಯಲ್ಲಿದ್ದವರಿಗೆ ಗಂಭೀರ ಅಪಾಯವಾಗಬಹುದಿತ್ತು. ಘಟನೆಯು ವೇದಿಕೆಯ ಹಿಂಭಾಗದಲ್ಲಿ ನಡೆದ ಕಾರಣ, ಭಾಷಣದ ವೇಳೆ ಇದು ಯಾರ ಗಮನಕ್ಕೂ ಬಾರದೆ ತಪ್ಪಿತು.
ಈ ಘಟನೆಯಿಂದ ಯಾವುದೇ ಜೀವಹಾನಿಯಾಗಿಲ್ಲವಾದರೂ, ರಾಲಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸುವರ್ಣ ನ್ಯೂಸ್ನ ಈ ಎಕ್ಸ್ಕ್ಲೂಸಿವ್ ವಿಡಿಯೋದಲ್ಲಿ ಘಟನೆಯ ಸಂಪೂರ್ಣ ದೃಶ್ಯದಲ್ಲಿ ಕಾಣಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ