
ಬೆಂಗಳೂರು(ಅ.15): ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ 2 ದಿನ ಉತ್ತಮವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿದೆ ಮಳೆಯಾಗಿದೆ. ಹಿಂಗಾರು ಮಳೆ ರಾಜ್ಯದಲ್ಲಿ ಚುರುಕುಗೊಂಡಿದೆ. ಇಂದಿನಿಂದ ಕೆಲ ಜಿಲ್ಲೆಗಳಲ್ಲಿ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಬರಪೀಡಿತ ತಾಲೂಕುಗಳ ಸಂಖ್ಯೆ 195ರಿಂದ 216ಕ್ಕೆ ಏರಿಕೆ: 20 ತಾಲೂಕುಗಳಲ್ಲಿ ಮಾತ್ರ ಮಳೆ
ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ರಾತ್ರಿ ಅಥವಾ ಸಂಜೆಯ ವೇಳೆ ವರುಣ ಅಬ್ಬರಿಸಲಿದ್ದಾನೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ