
ಬೆಂಗಳೂರು9ಏ.22): ರಾಜ್ಯದ ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ ಸೇರಿದಂತೆ 7ಕ್ಕೂ ಹೆಚ್ಚು ಜಿಲ್ಲೆಗಳ ಹಲವು ಕಡೆ ಸೋಮವಾರ ತಡರಾತ್ರಿ ಮಳೆ ಆರ್ಭಟ ಮುಂದುವರಿದ್ದು, ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿವೆ.
ಉತ್ತರಕನ್ನಡ ಜಿಲ್ಲೆಯ ವಿವಿಧ ಕಡೆ ಗುಡುಗು ಸಿಡಿಲು ಸಹಿತ ಅಲಿಕಲ್ಲಿನ ಭಾರಿ ಮಳೆಯಾಗಿದ್ದು, ಮನೆ, 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ತೆಂಗು, ಮಾವು ಸೇರಿದಂತೆ ಇತರ ಫಸಲುಗಳಿಗೆ ಹಾನಿಯಾಗಿದೆ.
ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ಬಾಳೆ, ಮಾವು: ಸಂಕಷ್ಟದಲ್ಲಿ ರೈತ..!
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಸುಮಾರು ನಗರದ ವಿವಿಧ ಪ್ರದೇಶಗಳ 250ಕ್ಕೂ ಹೆಚ್ಚ ಮನೆಗಳಿಗೆ ನುಗ್ಗಿದ ನೀರು ಮನೆಗಳಿಗೆ ತೊಂದರೆಯಾಗಿದ್ದರೆ, ಮರಗಳು ಬಿದ್ದು 4 ಬೈಕ್ಗಳು, ಕಾರು, ಮನೆಗಳ ಜಖಂ ಆಗಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಮಳೆಗೆ ನಾಶವಾಗಿದ್ದು, ರೈತರಿಗೆ ಬರ ಸಿಡಿಲು ಬಡಿದಂತಾಗಿದೆ. ಇನ್ನು ಉಡುಪಿ ಜಿಲ್ಲೆಯ ಕಾರ್ಕಳ, ಬಳ್ಳಾರಿಯ ಹೂವಿನಹಡಗಲಿಯಲ್ಲೂ ಸಾಧಾರಣ ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ