ಕರ್ನಾಟಕದಲ್ಲಿ ಮಳೆ ಮುಂದುವರಿಕೆ, ನೈಸರ್ಗಿಕ ವಿಕೋಪ‌ ಇಲಾಖೆ ಮುನ್ಸೂಚನೆ

Published : May 09, 2022, 04:56 PM ISTUpdated : May 09, 2022, 04:58 PM IST
ಕರ್ನಾಟಕದಲ್ಲಿ ಮಳೆ ಮುಂದುವರಿಕೆ, ನೈಸರ್ಗಿಕ ವಿಕೋಪ‌ ಇಲಾಖೆ ಮುನ್ಸೂಚನೆ

ಸಾರಾಂಶ

* ಕರ್ನಾಟದಲ್ಲಿ ಮಳೆ ಮುಂದುವರಿಕೆ, ನೈಸರ್ಗಿಕ ವಿಕೋಪ‌ ಇಲಾಖೆಯಿಂದ ಮುನ್ಸೂಚನೆ  * ರಾಜ್ಯ ನೈಸರ್ಗಿಕ ವಿಕೋಪ‌ ಇಲಾಖೆಯಿಂದ ಮಳೆ ಮುನ್ಸೂಚನೆ  * ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ

ಬೆಂಗಳೂರು, (ಮೇ.09): ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ನಾಳೆವರೆಗೂ(ಮೇ.10) ಮಳೆ ಮುಂದುವರೆಯುವ ಸಾಧ್ಯತೆ ಇದೆ.  ಈ ಬಗ್ಗೆ  ರಾಜ್ಯ ನೈಸರ್ಗಿಕ ವಿಕೋಪ‌ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ‌ ಇಲಾಖೆ ಮಾಹಿತಿ ನೀಡಿದೆ.

Karnataka Rains: ಕರ್ನಾಟಕದ ಹಲವು ಜಿಲ್ಲೆಯಲ್ಲಿ ಭಾರೀ ಮಳೆ: 2 ಬಲಿ

ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ  ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಿದೆ.

 ಚಂಡಮಾರುತ ಎಫೆಕ್ಟ್
ಒಡಿಶಾ, ಆಂಧ್ರಪ್ರದೇಶ ಮತ್ತು ಬಂಗಾಳದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ರಾತ್ರೋರಾತ್ರಿ ಅಭಿವೃದ್ಧಿಗೊಂಡ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿದೆ. ಅಸಾನಿ ಚಂಡಮಾರುತವು ತನ್ನ ದಾರಿಯಲ್ಲಿ ಸಾಗುತ್ತಿರುವುದರಿಂದ ಈ ವಾರ ಮೂರು ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆ ನೀಡಲಾಗಿದೆ. 

ಮಂಗಳವಾರ ಸಂಜೆಯಿಂದ ಭಾರೀ ಮಳೆ ಪ್ರಾರಂಭವಾಗುತ್ತದೆ ಮತ್ತು ಒಡಿಶಾದ ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 11ರಂದು 5 ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೇ 10ರಂದು ಗಂಟೆಗೆ 100 ಕಿಮೀ ವೇಗದಲ್ಲಿ ಬೀಸುವ ಗಾಳಿಯ ವೇಗವು ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 4 ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ಪ್ರಕ್ಷುಬ್ಧವಾಗಿರುತ್ತದೆ ಎಂದು IMD ಹವಾಮಾನ ಮುನ್ಸೂಚನಾ ಸಂಸ್ಥೆ ಎಚ್ಚರಿಸಿದೆ. ಹಾಗೇ ಮೇ 10ರವರೆಗೆ ಅಂಡಮಾನ್ ಸಮುದ್ರ ಮತ್ತು ಬಂಗಾಳಕೊಲ್ಲಿಗೆ ತೆರಳದಂತೆ ಮೀನುಗಾರರಿಗೆ ಸಲಹೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು